ಗುಜರಾತ್ ರಾಜ್ಯಸಭಾ ಚುನಾವಣೆ: ಹಸ್ತಕ್ಷೇಪಕ್ಕೆ ಸುಪ್ರೀಂ ಕೋರ್ಟ್ ನಕಾರ, ಕಾಂಗ್ರೆಸ್‌ಗೆ ಹಿನ್ನಡೆ

ಹೊಸದಿಲ್ಲಿ: ಗುಜರಾತ್‌ನಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ನಡೆಯುವ ಚುನಾವಣೆ ಸಂಬಂಧ ಚುನಾವಣೆ ಆಯೋಗ ಹೊರಡಿಸಿದ ಅಧಿಸೂಚನೆ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಇದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಬಿ.ಆರ್ ಗವಾಯ್ ಅವರನ್ನೊಳಗೊಂಡ ರಜಾ ಕಾಲದ ಪೀಠ, ಗುಜರಾತ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತು. ಆದರೆ ಚುನಾವಣೆಯ ಬಳಿಕ, ಎರಡು ಸ್ಥಾನಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸುವ ಆಯೋಗದ ತೀರ್ಮಾನವನ್ನು ಪ್ರಶ್ನಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಕೋರ್ಟ್ ತಿಳಿಸಿತು. ಗುಜರಾತ್‌ನ ಎರಡು ರಾಜ್ಯಸಭೆ ಸ್ಥಾನಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸುವುದು ಕಾನೂನುಬಾಹಿರವಲ್ಲ ಎಂದು ಆಯೋಗ ಜೂನ್ 23ರಂದು ಸುಪ್ರೀಂ ಕೋರ್ಟಿಗೆ ಮನವರಿಕೆ ಮಾಡಿಕೊಟ್ಟಿತ್ತು. 1957ರಿಂದಲೂ ಚಾಲ್ತಿಯಲ್ಲಿರುವ ನಿಯಮಗಳನ್ನೇ ಈಗಲೂ ಅನುಸರಿಸಲಾಗಿದೆ ಎಂದು ಆಯೋಗ ಹೇಳಿದ್ದು, ಕಾಂಗ್ರೆಸ್ ಅರ್ಜಿಯನ್ನು ತಿರಸ್ಕರಿಸುವಂತೆ ಕೋರಿತ್ತು. ಆಯೋಗ ಪಕ್ಷಪಾತಿಯಾಗಿ ವರ್ತಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಚುನಾವಣೆ ಆಯೋಗ ಸುಪ್ರೀಖ ಕೋರ್ಟಿಗೆ ಸಲ್ಲಿಸಿದ ಅಫಿದವಿತ್‌ನಲ್ಲಿ ತಿರಸ್ಕರಿಸಿದೆ. 2006 ಮತ್ತು 2009ರಲ್ಲೂ ಹೀಗೆ ಎರಡು ಸ್ಥಾನಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿತ್ತು. ದಿಲ್ಲಿ ಮತ್ತು ಮುಂಬಯಿ ಹೈಕೋರ್ಟ್‌ಗಳೂ ಹಿಂದಿನ ತೀರ್ಪಿನಲ್ಲಿ ಈ ನಿರ್ಧಾರವನ್ನು ಎತ್ತಿ ಹಿಡಿದಿದ್ದವು ಎಂಬ ಅಂಶವನ್ನು ಆಯೋಗ ಸುಪ್ರೀಂ ಕೋರ್ಟಿನ ಗಮನಕ್ಕೆ ತಂದಿತ್ತು. ಗುಜರಾತ್ ಕಾಂಗ್ರೆಸ್ ಅರ್ಜಿಯ ಮೇರೆಗೆ ಜೂನ್ 24ರೊಳಗೆ ಉತ್ತರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಚುನಾವಣೆ ಆಯೋಗಕ್ಕೆ ಜೂನ್ 19ರಂದು ನೋಟೀಸ್ ಜಾರಿ ಮಾಡಿತ್ತು. ಕಾಂಗ್ರೆಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ತಂಖಾ, ದಿಲ್ಲಿ ಮತ್ತು ಮುಂಬಯಿ ಹೈಕೋರ್ಟ್ ತೀರ್ಪುಗಳು ಕಾಂಗ್ರೆಸ್ ಪರವಾಗಿವೆ ಎಂದು ವಾದಿಸಿದರು. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕ್ರಮವಾಗಿ ಗಾಂಧಿನಗರ ಮತ್ತು ಅಮೇಠಿಯಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಗುಜರಾತ್‌ನ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಚುನಾವಣೆ ಅನಿವಾರ್ಯವಾಗಿದೆ.


from India & World News in Kannada | VK Polls http://bit.ly/2Fxb1o3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...