ಧಾರ್ಮಿಕ ಸಹಿಷ್ಣುತೆ ವರದಿಗೆ ತಿರಸ್ಕಾರ: ಅಮೆರಿಕದ ಅರ್ಹತೆ ಪ್ರಶ್ನಿಸಿದ ಭಾರತ

ಹೊಸದಿಲ್ಲಿ: ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆಯ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಬಿಂಬಿಸಿದ ಅಮೆರಿಕದ ವಿದೇಶಾಂಗ ಇಲಾಖೆ ವರದಿಯನ್ನು ತಿರಸ್ಕರಿಸಿದೆ. ಭಾರತ ಸಹಿಷ್ಣುತೆ ಮತ್ತು ಎಲ್ಲರನ್ನೂ ಒಳಗೊಳ್ಳುವಿಕೆಯ ನೀತಿಗೆ ಬದ್ಧವಾಗಿದ್ದು ತನ್ನ ಜಾತ್ಯತೀತ ಮೌಲ್ಯಗಳ ಬಗ್ಗೆ ಹೆಮ್ಮೆ ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. 'ಭಾರತ ತನ್ನ ಜಾತ್ಯತೀತ ಮೌಲ್ಯಗಳ ಬಗ್ಗೆ ಹೆಮ್ಮೆಪಡುತ್ತದೆ. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ತನ್ನ ಬಹುತ್ವದ ಸಮಾಜವೇ ದೊಡ್ಡ ಶಕ್ತಿಯಾಗಿದ್ದು, ಸಹಿಷ್ಣುತೆ ಮತ್ತು ಒಳಗೊಳ್ಳುವಿಕೆಗೆ ದೀರ್ಘಕಾಲದಿಂದಲೂ ಬದ್ಧತೆ ಹೊಂದಿದೆ' ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ಹೇಳಿದೆ. ಭಾರತದಂತಹ ದೇಶಗಳು ತಮ್ಮ ಪ್ರಜೆಗಳ ಸಾಂವಿಧಾನ ಹಕ್ಕುಗಳನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ತಿಳಿದಿವೆ. ಅಮೆರಿಕದಂತಹ ದೇಶಗಳಿಗೆ ಇತರ ದೇಶಗಳ ಸಾಮಾಜಿಕ ವ್ಯವಸ್ಥೆ ಬಗ್ಗೆ ಟೀಕೆ-ಟಿಪ್ಪಣಿ ಮಾಡಲು ಇರುವ ಅರ್ಹತೆಯೇನು? ಎಂದು ವಿದೇಶಾಂಗ ಸಚಿವಾಲಯ ಖಾರವಾಗಿ ಪ್ರಶ್ನಿಸಿದೆ. 'ಭಾರತದ ಸಂವಿಧಾನ ಅಲ್ಪಸಂಖ್ಯಾತರೂ ಸೇರಿದಂತೆ ತನ್ನ ಎಲ್ಲ ಪ್ರಜೆಗಳ ಮೂಲಭೂತ ಹಕ್ಕುಗಳನ್ನು ರಕ್ಷಿಸುತ್ತದೆ. ಹೀಗಿರುವಾಗ ನಮ್ಮ ಪ್ರಜೆಗಳ ಸಾಂವಿಧಾನಿಕ ಹಕ್ಕುಗಳ ರಕ್ಷಣೆ ಬಗ್ಗೆ ವಿದೇಶಿ ಸಂಸ್ಥೆಯೊಂದು ವರದಿ ಮಾಡುವ ಅರ್ಹತೆಯನ್ನೇ ನಾವು ಪ್ರಶ್ನಿಸುತ್ತೇವೆ' ಎಂದು ಸಚಿವಾಲಯ ಹೇಳಿದೆ. ಅಮೆರಿಕದ ವಿದೇಶಾಂಗ ಸಚಿವಾಲಯ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಕುರಿತ ತನ್ನ ವಾರ್ಷಿಕ ವರದಿಯನ್ನು ಶುಕ್ರವಾರ ಬಿಡುಗಡೆ ಮಾಡಿತ್ತು. 2018ರಲ್ಲಿ ಅಲ್ಪಸಂಖ್ಯಾತ ಸಮುದಾಯದ ಕೆಲವು ವ್ಯಕ್ತಿಗಳ ಮೇಲೆ ನಡೆದ ಗುಂಪು ದಾಳಿಗಳನ್ನು ವರದಿಯಲ್ಲಿ ಪ್ರಸ್ತಾಪಿಸಿತ್ತು. 'ಭಾರತದ ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳನ್ನು ನೀಡಿದ್ದರೂ, ಇತ್ತೀಚಿನ ವರ್ಷಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಇತಿಹಾಸಕ್ಕೆ ಧಕ್ಕೆಯಾಗಿದೆ' ಎಂದು ವರದಿಯಲ್ಲಿ ಹೇಳಿತ್ತು. ಭಾರತದ 29 ರಾಜ್ಯಗಳ ಪೈಕಿ 24 ರಾಜ್ಯಗಳು ಗೋಹತ್ಯೆ ನಿಷೇಧ ಜಾರಿಗೊಳಿಸಿವೆ ಎಂದೂ ಅಮೆರಿಕದ ವರದಿ ಹೇಳಿದೆ.


from India & World News in Kannada | VK Polls http://bit.ly/2X21NuM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...