ಹೈದರಾಬಾದ್: ತೆಲುಗುದೇಶಂ ವರಿಷ್ಠ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಅವರಿಗೆ ನೀಡಿದ್ದ ಝಡ್ ಪ್ಲಸ್ ಭದ್ರತೆಯನ್ನು ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಸರಕಾರ ರದ್ದುಪಡಿಸಿದೆ. ನಾಯ್ಡು ಮತ್ತು ಅವರ ಪುತ್ರ, ಮಾಜಿ ಸಚಿವ ನಾರಾ ಲೋಕೇಶ್ ಅವರಿಗೆ ಇಬ್ಬರು ಗನ್ಮೆನ್ಗಳ ಭದ್ರತೆ ಮಾತ್ರ ನೀಡಲು ಸರಕಾರ ನಿರ್ಧರಿಸಿದೆ. ಅವರ ಕುಟುಂಬ ಸದಸ್ಯರಿಗೆ ನೀಡಿದ್ದ ಭದ್ರತೆಯನ್ನು ಸಂಪೂರ್ಣ ಹಿಂಪಡೆಯಲಾಗಿದೆ. ನಾಯ್ಡು ಅವರ ಒಂದು ವರ್ಷದ ಮೊಮ್ಮಗನಿಗೂ ನೀಡಿದ್ದ ವಿಶೇಷ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ. ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ತಮಗೆ ನಕ್ಸಲರಿಂದ ಜೀವಬೆದರಿಕೆ ಇದೆ ಎಂಬ ಕಾರಣಕ್ಕೆ ಝಡ್ ಪ್ಲಸ್ ಭದ್ರತೆ ಪಡೆದುಕೊಂಡಿದ್ದರು. ನಾಯ್ಡು ಅವರು ಈಗ ಮುಖ್ಯಮಂತ್ರಿ ಆಗಿರದ ಕಾರಣ ಜೀವಬೆದರಿಕೆ ಈಗ ಇಲ್ಲ. ಆದ್ದರಿಂದ ವಿಶೇಷ ಭದ್ರತೆಯನ್ನು ರದ್ದುಪಡಿಸಲಾಗಿದೆ ಎಂದು ಜಗನ್ ಸರಕಾರ ತಿಳಿಸಿದೆ. ಎರಡು ತಿಂಗಳ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದ ಜಗನ್ಮೋಹನ್ ರೆಡ್ಡಿ ಅವರ ವೈಎಸ್ಸಾರ್ಸಿಪಿ ಸರಕಾರ ರಾಜಕೀಯ ಹಗೆ ಸಾಧಿಸುತ್ತಿದೆ ಎಂದು ಟಿಡಿಪಿ ದೂರಿದೆ.
from India & World News in Kannada | VK Polls http://bit.ly/2X5PDRx