ವಾರಾಣಸಿ: ಪ್ರಧಾನಿ ಮೋದಿ ಶನಿವಾರ ವಾರಾಣಸಿ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಲು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಬಂದ ಅವರು ಮೋದಿ ಅವರನ್ನು ಶಾಸ್ತ್ರಿ ಅವರ ಪುತ್ರರಾದ ಅನಿಲ್, ಸುನಿಲ್ ಶಾಸ್ತ್ರಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು. ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ, ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಮಹೇಂದ್ರ ನಾಥ್ ಪಾಂಡೆ ಈ ಸಂದರ್ಭದಲ್ಲಿ ಹಾಜರಿದ್ದರು. ವಾರಣಾಸಿಯ ಬಾಬತ್ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸ್ತ್ರಿ ಅವರ 18 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಮೇಲೆ ಗಣ್ಯರೆಲ್ಲ ಪುಷ್ಪ ನಮನ ಸಲ್ಲಿಸಿದರು. ದೇಶದ ಮೊದಲ ಗೃಹ ಸಚಿವ, ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯ್ ಪಟೇಲ್ ಸ್ಮರಣಾರ್ಥ ಗುಜರಾತಿನ ನರ್ಮದಾ ನದಿಯ ಮಧ್ಯೆ ನಿರ್ಮಿಸಿರುವ 'ಏಕತಾ ಪ್ರತಿಮೆ' ಕೆತ್ತಿದ ಶಿಲ್ಪಿ ರಾಮ್ ವಿ ಸೂತಾರ್ ಅವರೇ ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. 2005ರಲ್ಲಿ ವಾರಾಣಸಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಲ್ ಬಹದ್ದೂರ್ ಶಾಸ್ತ್ರಿ ಹೆಸರನ್ನಿಡಲಾಗಿತ್ತು.
from India & World News in Kannada | VK Polls https://ift.tt/2YCspPE