ಟೀಮ್ ಇಂಡಿಯಾ ಕೋಚ್ ರೇಸ್‌ನಲ್ಲಿ ವೀರು?

ಮುಂಬಯಿ: ನಿಮಗೆಲ್ಲರಿಗೂ ತಿಳಿದಿರುವಂತೆಯೇ ಹೊಸ ಕೋಚ್ ಹುಡುಕಾಟದಲ್ಲಿದೆ. ಇದರಂತೆ ನೂತನ ಕೋಚ್ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಏಕದಿನ ವಿಶ್ವಕಪ್ ಬಳಿಕ 45 ದಿನಗಳ ವರೆಗೆ ಕೋಚ್ ಅವಧಿಯನ್ನು ಮುಂದುವರಿಸಲಾಗಿದೆ. ಈ ವೇಳೆಯಲ್ಲಿ ಹೊಸ ಕೋಚ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕೋಚ್ ರವಿಶಾಸ್ತ್ರಿ ಜತೆಗೆ ಸಹಾಯಕ ಕೋಚ್‌ಗಳಾದ ಸಂಜಯ್ ಬಂಗಾರ್, ಭರತ್ ಅರುಣ್ ಹಾಗೂ ಆರ್‌ ಶ್ರೀಧರ್ ಅವರನ್ನು ಸಹ ಹೊಸ ಕೋಚ್ ಆಯ್ಕೆಯಲ್ಲಿ ಮಗದೊಮ್ಮೆ ಪರಿಗಣಿಸಲಾಗುವುದು. ಇವರ ಮುಂದಾಳತ್ವದಲ್ಲಿ ಭಾರತ ವಿಶ್ವಕಪ್‌ನಲ್ಲಿ ಮಿಂಚದಿದ್ದರೂ ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವನ್ನು ದಾಖಲಿಸಿದೆ. ರವಿಶಾಸ್ತ್ರಿ ಹೊರತಾಗಿಯೂ 2011ರ ವಿಶ್ವಕಪ್ ವಿಜೇತ ತರಬೇತುದಾರ ಗ್ಯಾರಿ ಕರ್ಸ್ಟನ್, ಟಾಮ್ ಮೂಡಿ, ವೀರೇಂದ್ರ ಸೆಹ್ವಾಗ್ ಹಾಗೂ ಮಹೇಲಾ ಜಯವರ್ಧನೆ ಸಹ ಕೋಚ್ ರೇಸ್‌ನಲ್ಲಿದ್ದಾರೆ ಎಂಬುದು ತಿಳಿದು ಬಂದಿದೆ. ಟಾಮ್ ಮೂಡಿ ಸಹ ಈಗಾಗಲೇ ತಮ್ಮ ಸಾಮರ್ಥ್ಯವನ್ನು ಮೆರೆದಿದ್ದಾರೆ. ಅವರ ಮಾರ್ಗದರ್ಶನದಲ್ಲಿ 2007ರಲ್ಲಿ ಶ್ರೀಲಂಕಾ ತಂಡವು ಏಕದಿನ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದಿತ್ತು. ಮಹೇಲಾ ಜಯವರ್ಧನೆ ಸಹ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಕೋಚ್ ವೃತ್ತಿ ಬಹಳಷ್ಟು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಅಲ್ಲದೆ ಕಳೆದ ಮೂರು ವರ್ಷಗಳಲ್ಲಿ ಎರಡು ಬಾರಿ ಐಪಿಎಲ್ ಕಿರೀಟ ಗೆಲ್ಲುವಲ್ಲಿ ನೆರವಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅನಿಲ್ ಕುಂಬ್ಳೆ ಅವರಿಂದ ತೆರವಾಗಿರುವ ಕೋಚ್ ಸ್ಥಾನಕ್ಕೆ ವೀರೇಂದ್ರ ಸೆಹ್ವಾಗ್ ಉತ್ಸುಕತೆಯನ್ನು ತೋರಿದ್ದರು. ಆದರೆ ಕೊಹ್ಲಿ ಒಲವಿನ ಬೆನ್ನಲ್ಲಿ ರವಿಶಾಸ್ತ್ರಿ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಮಗದೊಮ್ಮೆ ಸೆಹ್ವಾಗ್ ಅಗ್ನಿ ಪರೀಕ್ಷೆಗಿಳಿಯಲಿದ್ದಾರೆ ಎಂಬುದು ತಿಳಿದು ಬಂದಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2XZhjIh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...