ದುರಹಂಕಾರ, ದುರ್ನಡತೆ ಸಹಿಸಲಾಗದು: ಸಂಸದರಿಗೆ ಪ್ರಧಾನಿ ಎಚ್ಚರಿಕೆ

ಹೊಸದಿಲ್ಲಿ: ನಿಮ್ಮ ವರ್ತನೆಗಳ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತಂದರೆ, ಅದು ಸ್ವೀಕಾರಾರ್ಹವಲ್ಲ ಎಂದು ಪ್ರಧಾನಿ ಮೋದಿ ಅವರು ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಸದಸ್ಯತ್ವ ಅಭಿಯಾನದ ಮುನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಈ ಎಚ್ಚರಿಕೆ ನೀಡಿದ್ದು ದುರಹಂಕಾರ , ದುರ್ನಡೆಯನ್ನು ಸಹಿಸಲಾಗದು. ನಿಮ್ಮಿಂದಾಗಿ ಪಕ್ಷಕ್ಕೆ ಕೆಟ್ಟ ಹೆಸರು ಬಂದರೆ ಅದು ಸ್ವೀಕಾರಾರ್ಹವಲ್ಲ ಎಂದರು. ಪಕ್ಷದ ಹಿರಿಯ ನಾಯಕ ವಿಜಯ್ ವರ್ಗೀಯ ಅವರ ಪುತ್ರ , ಶಾಸಕ ಆಕಾಶ್ ವಿಜಯ ವರ್ಗೀಯ ಸರಕಾರಿ ಅಧಿಕಾರಿಗೆ ಬ್ಯಾಟ್‌ನಿಂದ ಥಳಿಸಿದ ಪ್ರಕರಣ ದೇಶಾದ್ಯಂತ ಖಂಡನೆಗೊಳಪಟ್ಟಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಪ್ರಧಾನಿ ತಮ್ಮ ಪಕ್ಷದ ನಾಯಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಪೂರ್ಣ ಪ್ರಮಾಣದಲ್ಲಿ ಹಾಜರಿರುವಂತೆ ಪ್ರಧಾನಿ ಅವರು ಸಂಸದರಿಗೆ ಸೂಚಿಸಿದರು. ಅದರ ಜತೆಗೆ ಜನರ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಳ್ಳುವಂತೆ ಸಹ ಹೇಳಿದ್ದಾರೆ. ಮೋದಿ, ಶಾಗೆ ಸನ್ಮಾನ ಲೋಕಸಭಾ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ ಇಂದು ಬಿಜೆಪಿ ಸಂಸದೀಯ ಸಭೆ ನಡೆದಿದ್ದು, ಪಕ್ಷವನ್ನು ಭಾರಿ ಗೆಲುವಿಗೆ ಮುನ್ನಡೆಸಿದ ಪ್ರಧಾನಿ ಮೋದಿ ಅವರನ್ನು ಪಕ್ಷದ ಹಿರಿಯ ನಾಯಕರು ಸನ್ಮಾನಿಸಿದ್ದಾರೆ. ಪಕ್ಷದ ಅಧ್ಯಕ್ಷ ಅಮಿತ್ ಶಾ ಮತ್ತು ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಸಹ ಸನ್ಮಾನಿಸಲಾಯಿತು,ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಬಿಜೆಪಿ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನವಾದ ಜುಲೈ 6 ರಂದು ವಾರಣಾಸಿಯಿಂದ ಪ್ರಧಾನಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಅಂದು ದೇಶಾದ್ಯಂತ, ಪ್ರತಿ ಬೂತ್‌ನಿಂದ ಕನಿಷ್ಠ 5 ಗಿಡಗಳನ್ನು ನೆಡುವಂತೆ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.


from India & World News in Kannada | VK Polls https://ift.tt/2KPXKeB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...