ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ನಡೆಸಿದ ಭಾಷಣ, ಇದೀಗ ಅವರನ್ನು ತಿಂಗಳು ಪೂರ್ತಿ ಬ್ಯುಸಿಯಾಗಿಸಿದೆ. ಗುಜರಾತ್, ಮುಂಬಯಿ, ಬಿಹಾರದಲ್ಲಿ ನಡೆಸಿದ ಭಾಷಣದ ವಿರುದ್ಧ ದಾಖಲಾಗಿದ್ದು, ಒಂದೇ ತಿಂಗಳಲ್ಲಿ ಐದು ಕೋರ್ಟ್ನಲ್ಲಿ ಬೇರೆ ಬೇರೆ ಮಾನನಷ್ಟ ಮೊಕದ್ದಮೆಗಳ ವಿಚಾರಣೆ ಎದುರಿಸಲಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂಬಂಧ ಬಿಜೆಪಿ-ಆರ್ಎಸ್ಎಸ್ ಸಿದ್ಧಾಂತ ಕಾರಣ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಸಂಬಂಧ ಗುರುವಾರ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಅವರು ವಿವಿಧೆಡೆ ನೀಡಿರುವ ಹೇಳಿಕೆಗಳಿಗೆ ಮೊಕದ್ದಮೆ ದಾಖಲಾಗಿದ್ದು, ಜುಲೈನಲ್ಲಿ ಒಟ್ಟಾರೆ 5 ಕೋರ್ಟ್ಗೆ ಅವರು ವಿಚಾರಣೆಗೆ ಹಾಜರಾಗಬೇಕಿದೆ. ಜುಲೈ 6ರಂದು ಪಾಟನಾ ಕೋರ್ಟ್ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಎಲ್ಲ ಕಳ್ಳರ ಹೆಸರಲ್ಲಿ ಮೋದಿ ಎಂಬ ಹೆಸರಿದೆ ಎಂಬ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ದ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅಂತೆಯೇ ಜು.9 ರಂದು ಅಹಮದಾಬಾದ್, ಜು.12ರಂದು ಗುಜರಾತ್ ಕೋರ್ಟ್, ಜು.24ರಂದು ಸೂರತ್ ಕೋರ್ಟ್ಗೆ ಹಾಜರಾಗಬೇಕಿದೆ. ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಜು.9ರಂದು ವಿಚಾರಣೆ ನಡೆಯಲಿದ್ದು, ಅಹಮದಾಬಾದ್ ಜಿಲ್ಲಾ ಕೊ-ಆಪರೇಟಿವ್ ಬ್ಯಾಂಕ್ ಹಾಗೂ ಅಲ್ಲಿನ ಅಧ್ಯಕ್ಷ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ವಿಚಾರಣೆ ಜು.12ರಂದು ನಡೆಯಲಿದೆ. ಮೋದಿ ಹೆಸರಿನವರೆಲ್ಲರೂ ಕಳ್ಳರು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಗುಜರಾತ್ ಕೋರ್ಟ್ನಲ್ಲಿ ಜು.24ರಂದು ಮತ್ತೊಂದು ವಿಚಾರಣೆ ನಡೆಯಲಿದೆ.
from India & World News in Kannada | VK Polls https://ift.tt/2J9d1oC