ಜಾಧವ್, ಕುಲ್‌ದೀಪ್‌ಗೆ ಕೊಕ್; ಕಾರ್ತಿಕ್, ಭುವಿ ಇನ್

ಬರ್ಮಿಂಗ್‌ಹ್ಯಾಮ್: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಎರಡು ಪ್ರಮುಖ ಬದಲಾವಣೆ ತರಲಾಗಿದೆ. ಕುಲ್‌ದೀಪ್ ಯಾದವ್ ಹಾಗೂ ಕೇದಾರ್ ಜಾಧವ್‌ರನ್ನು ತಂಡದಿಂದ ಕೈಬಿಡಲಾಗಿದ್ದು, ಇವರಿಬ್ಬರ ಸ್ಥಾನಗಳಿಗೆ ಹಾಗೂ ಕಮ್‌ಬ್ಯಾಕ್ ಮಾಡಿದ್ದಾರೆ. ಇದರಿಂದಾಗಿ ಇಂಗ್ಲೆಂಡ್ ವಿರುದ್ಧ ನಿಧಾನಗತಿಯ ಬ್ಯಾಟಿಂಗ್ ಮಾಡುವ ಮೂಲಕ ಟೀಕೆಗೆ ಗುರಿಯಾಗಿರುವ ಜಾಧವ್ ತಮ್ಮ ತಪ್ಪಿಗಾಗಿ ದೊಡ್ಡ ಬೆಲೆಯನ್ನೇ ತೆರಬೇಕಾಗಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಹಂತದಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ದಿನೇಶ್ ಕಾರ್ತಿಕ್ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇನ್ನೊಂದೆಡೆ ಚೊಕ್ಕದಾದ ಬೌಂಡರಿಯಲ್ಲಿ ಚೈನಾಮನ್ ಖ್ಯಾತಿಯ ಕುಲ್‌ದೀಪ್ ಯಾದವ್ ವೈಫಲ್ಯವನ್ನು ಅನುಭವಿಸಿದ್ದರು. ಇದೀಗ ಗಾಯಮುಕ್ತಗೊಂಡಿರುವ ಭುವನೇಶ್ವರ್ ಕುಮಾರ್ ತಂಡವನ್ನು ಸೇರಕೊಂಡಿದ್ದಾರೆ. ಇವರಿಗಾಗಿ ಕುಲ್‌ದೀಪ್ ತಮ್ಮ ಸ್ಥಾನ ಬಿಟ್ಟುಕೊಂಡಿದ್ದಾರೆ. ಒಟ್ಟಿನಲ್ಲಿ ಶಿಖರ್ ಧವನ್ ಬಳಿಕ ಗಾಯದಿಂದಾಗಿ ಆಲ್‌ರೌಂಡರ್ ವಿಜಯ್ ಶಂಕರ್ ಸೇವೆಯನ್ನು ಭಾರತ ಕಳೆದುಕೊಂಡಿದೆ. ಹಾಗಾಗಿ ನಾಲ್ಕನೇ ಸ್ಥಾನದಲ್ಲಿ ಉದಯೋನ್ಮುಖ ರಿಷಬ್ ಪಂತ್ ಆಡುವುದು ಖಚಿತವೆನಿಸಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2RO4eeC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...