ಹೊಸದಿಲ್ಲಿ: ಕರ್ನಾಟಕದಲ್ಲಿ ನಡೆಯತ್ತಿರುವ ರಾಜಕೀಯ ಬೆಳವಣಿಗೆಗಳಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಸಂಸತ್ತಿನ ಘನತೆ, ಗೌರವವವನ್ನು ಕಾಪಾಡಲು ಸದಾ ಬದ್ಧ ಎಂದರು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಪ್ರಸ್ತಾಪಿಸಿದರು. ಇದಕ್ಕೆ ಕೂಡಲೇ ಪ್ರತಿಕ್ರಿಯೆ ನೀಡಿ ರಕ್ಷಣಾ ಸಚಿವ, ಕರ್ನಾಟಕದಲ್ಲಿ ಪ್ರತಿ ಬಾರಿ ರಾಜಕೀಯ ಬೆಳವಣಿಗೆ ನಡೆದರೆ ಬಿಜೆಪಿ ಕರೆ ಬೆರಳು ತೋರಿಸಲಾಗುತ್ತದೆ. ಆದರೆ ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಹಸ್ತಕ್ಷೇಪವಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವವನ್ನು ಆರಂಭಿಸಿದ್ದೇ ರಾಹುಲ್ ಗಾಂಧಿ. ಪಕ್ಷಾಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದರು. ಅಲ್ಲಿಂದ ಆರಂಭವಾಯಿತು ರಾಜೀನಾಮೆ ಸರಣಿ. ಅವರಲ್ಲಿರುವ ಲೋಪವನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದು ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
from India & World News in Kannada | VK Polls https://ift.tt/2NCDKOP