ರಾಯುಡುಗೆ ಕೈ ಮುಗಿದ ಕೊಹ್ಲಿ; ಹೈ ಡ್ರಾಮಾ ಎಂದ ಫ್ಯಾನ್ಸ್

ಹೊಸದಿಲ್ಲಿ: ಏಕದಿನ ವಿಶ್ವಕಪ್‌ಗಾಗಿನ ಭಾರತ ತಂಡದಿಂದ ಒಂದಲ್ಲ ಎರಡಲ್ಲ ಮೂರು ಬಾರಿ ಕಡೆಗಣಿಸಿದ್ದರಿಂದ ತೀವ್ರ ಮನನೊಂದಿರುವ ಮಧ್ಯಮ ಕ್ರಮಾಂಕದ ಅನುಭವಿ ಬ್ಯಾಟ್ಸ್‌ಮನ್ , ಬಿಸಿಸಿಐ ಮೇಲಿನ ಕೋಪಕ್ಕೆ ಎಲ್ಲ ಪ್ರಕಾರದ ಕ್ರಿಕೆಟ್‌ಗೆ ನಿವೃತ್ತಿಯನ್ನು ಸಲ್ಲಿಸಿದ್ದಾರೆ. ರಾಯುಡು ಅನಿರೀಕ್ಷಿತ ನಿವೃತ್ತಿಯು ಭಾರತೀಯ ಕ್ರಿಕೆಟ್ ರಂಗದಲ್ಲಿ ತಲ್ಲಣ ಮೂಡಿಸಿದೆ. ಮಾಜಿಗಳಾದ ಗೌತಮ್ ಗಂಭೀರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರಂತಹ ಆಟಗಾರರು ರಾಯುಡು ಬೆಂಬಲಕ್ಕೆ ನಿಂತಿದ್ದಾರೆ. ಏತನ್ಮಧ್ಯೆ ಟೀಮ್ ಇಂಡಿಯಾ ನಾಯಕ ರಾಯುಡು ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದರು. ಕೊಹ್ಲಿ ತಮ್ಮ ಸಂದೇಶದಲ್ಲಿ 'ಅಗ್ರ ವ್ಯಕ್ತಿ' ಎಂದು ಉಲ್ಲೇಖಿಸಿದ್ದರಲ್ಲದೆ ಕೈಮುಗಿದುಕೊಳ್ಳು ಇಮೋಜಿ ಹಂಚಿಕೊಂಡಿದ್ದಾರೆ. ಇದೀಗ ಕೊಹ್ಲಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಕುಪಿತರಾಗಿರುವ ಅಭಿಮಾನಿಗಳು ಹೈ ಡ್ರಾಮಾ ಎಂದು ಜರೆದಿದ್ದಾರೆ. ಟೀಮ್ ಇಂಡಿಯಾ ವ್ಯವಸ್ಥಾಪಕ ಮಂಡಳಿ ಹಾಗೂ ಆಯ್ಕೆ ಮಂಡಳಿಯು ಒಮ್ಮತದ ನಿರ್ಧಾರದಿಂದ ಅಂಬಟಿ ರಾಯುಡುರನ್ನು ಆಯ್ಕೆಗೆ ಪರಿಗಣಿಸದಿರಲು ನಿರ್ಧರಿಸಿದ್ದರು. ಇದರಲ್ಲಿ ನಾಯಕ ವಿರಾಟ್ ಕೊಹ್ಲಿ ಪಾತ್ರ ಕೂಡಾ ಇದೆ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ. ಒಟ್ಟಾರೆಯಾಗಿ ರಾಯುಡುಗೆ ಶುಭ ಹಾರೈಸಲು ಹೋಗಿ ಕೊಹ್ಲಿ ಅಭಿಮಾನಿಗಳ ಕೈಯಿಂದ ಏಟು ತಿಂದಂತಾಗಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2XnPowz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...