ಬರ್ಮಿಂಗ್ಹ್ಯಾಮ್: ಐಸಿಸಿ 2019 ಏಕದಿನ ವಿಶ್ವಕಪ್ನಲ್ಲಿ ಮಂಗಳವಾರ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆಗಳನ್ನು ತರಲಾಗಿದೆ. ಕೇದರ್ ಜಾಧವ್ ಹಾಗೂ ಕುಲ್ದೀಪ್ ಯಾದವ್ ಸ್ಥಾನಗಳಿಗೆ ದಿನೇಶ್ ಕಾರ್ತಿಕ್ ಹಾಗೂ ಭುವನೇಶ್ವರ್ ಕುಮಾರ್ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಕೀಪರ್ಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕಾಕತಾಳೀಯವೆಂಬಂತೆ ಮಹೇಂದ್ರ ಸಿಂಗ್ ಧೋನಿ, ರಿಷಬ್ ಪಂತ್, ದಿನೇಶ್ ಕಾರ್ತಿಕ್ ಹಾಗೂ ಕೆಎಲ್ ರಾಹುಲ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಹೆಚ್ಚುವರಿ ಬೌಲರ್ಗಳ ಕೊರತೆಯನ್ನು ಭಾರತ ಕಾಡುತ್ತದೆ. ಇದನ್ನು ನಾಯಕ ವಿರಾಟ್ ಕೊಹ್ಲಿ ಹೇಗೆ ನಿಭಾಯಿಸಲಿದ್ದಾರೆಂಬುದು ಕುತೂಹಲಕ್ಕೆ ಕಾರಣವಾಗಿದೆ. ಇಂಗ್ಲೆಂಡ್ ವಿರುದ್ಧ ನಿಧಾನಗತಿಯ ಬ್ಯಾಟಿಂಗ್ ಮೂಲಕ ನೀರಸ ಪ್ರದರ್ಶನ ನೀಡಿರುವುದಕ್ಕೆ ಕೇದರ್ ಜಾಧವ್ರನ್ನು ಕೈಬಿಡಲಾಗಿದೆ. ಇದೀಗ ಕಾರ್ತಿಕ್ ಒತ್ತಡವನ್ನು ನಿಭಾಯಿಸಲು ಯಶಸ್ವಿಯಾಗುವರೇ ಎಂಬುದು ಚಿಂತೆಗೀಡು ಮಾಡಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/308shHZ