ಹೊಸದಿಲ್ಲಿ: ರಾಜೀನಾಮೆಯನ್ನು ಸಹೋದರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವದ್ರಾ ಶ್ಲಾಘಿಸಿದ್ದಾರೆ. ಲೋಕಸಭೆ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಅಧಿಕೃತವಾಗಿ ರಾಜೀನಾಮೆ ನೀಡಿದ ಅವರು, ರಾಜೀನಾಮೆ ಪತ್ರವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ನಿಮ್ಮ ನಿರ್ಧಾರಕ್ಕೆ ಅತೀವ ಗೌರವ ಸೂಚಿಸುತ್ತೇನೆ. ಕೆಲವರಲ್ಲಿ ಮಾತ್ರ ಇಂತಹ ಗಟ್ಟಿತನದ ನಿರ್ಧಾರವನ್ನು ಪ್ರಕಟಿಸುವ ಧೈರ್ಯವಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುರೆಯಲು ಇಚ್ಛಿಸಿರದ ಅವರನ್ನು ಅನೇಕ ನಾಯಕರು ಭೇಟಿಯಾಗಿ ಮನವೊಲಿಸುವ ಪ್ರಯತ್ನ ನಡೆಸಿದ್ದರು. ಕಾಂಗ್ರೆಸ್ನಲ್ಲಿ ಅಮೂಲಾಗ್ರ ಬದಲಾವಣೆ ಅನಿವಾರ್ಯ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದರು. ಚುನಾವಣೆಯ ಫಲಿತಾಂಶದ ಬಳಿಕ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲೇ ರಾಹುಲ್ ಸೋಲಿನ ಹೊಣೆ ಹೊತ್ತುಕೊಂಡಿದ್ದು, ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಪಕ್ಷವೇ ನಿರ್ಧರಿಸಲಿ ಎಂದು ಅವರು ಹೇಳಿಕೆ ನೀಡಿದ್ದರು. ಮೇ 25ರಂದು ನಡೆದ ಸಭೆ ಬಳಿಕ ರಾಹುಲ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ಆಯ್ಕೆ ಮಾಡುವಂತೆ ತಿಳಿಸಿದ್ದರು. ಪ್ರಸ್ತುತ ರಾಹುಲ್ ರಾಜೀನಾಮೆ ಅಂಗೀಕರಿಸಿ, ಹೊಸ ಅಧ್ಯಕ್ಷರ ನೇಮಕಕ್ಕೆ ಮತ್ತೆ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗುತ್ತದೆ. ಕಾಂಗ್ರೆಸ್ನ ಹಿರಿಯ ನಾಯಕರಲ್ಲಿ ವಿಶ್ವಾಸವಿದ್ದು ಅರ್ಹ ಹಾಗೂ ಸಮರ್ಥರನ್ನು ಕಾಂಗ್ರೆಸ್ ಪಕ್ಷದ ಸಾರಥಿಯನ್ನಾಗಿ ಮಾಡುವಂತೆ ರಾಹುಲ್ ಹೇಳಿದ್ದಾರೆ.
from India & World News in Kannada | VK Polls https://ift.tt/2XpnEaS