370ನೇ ವಿಧಿ ರದ್ದಿಗೆ ವಿರೋಧ: ಪಕ್ಷ ತ್ಯಜಿಸಿದ ಕಾಂಗ್ರೆಸ್ ನಾಯಕ

ಹೊಸದಿಲ್ಲಿ: ರದ್ದತಿಯನ್ನು ವಿರೋಧಿಸಿ ದೇಶವಾಸಿಗಳಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವ ಕಾಂಗ್ರೆಸ್‌ಗೆ ತಮ್ಮದೇ ಪಕ್ಷದೊಳಗಿಂದ ಕೂಡ ವಿರೋಧ ವ್ಯಕ್ತವಾಗುತ್ತಿದೆ. ಪಕ್ಷದ ಈ ನಡೆಯನ್ನು ವಿರೋಧಿಸಿ ರಾಜ್ಯಸಭಾ ಸದಸ್ಯ ಭುವನೇಶ್ವರ್ ಕಲಿತಾ ಪಕ್ಷದ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಾವು ಕಲಿತಾ ಅವರ ರಾಜೀನಾಮೆಯನ್ನು ಅಂಗೀಕಾರ ಮಾಡಿರುವುದಾಗಿ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಹೇಳಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಅವರು ಸ್ಪಷ್ಟನೆ ನೀಡದಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ಅವರು ಕೈ ನಿರ್ಧಾರದಿಂದ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಅಸ್ಸಾಂನಿಂದ ರಾಜ್ಯಸಭಾ ಸಂಸದರಾಗಿರುವ ಭುಭನೇಶ್ವರ್ ಕಲಿತಾ, ಅಮಿತ್ ಶಾ ಮಂಡಿಸಿದ ಕಾಶ್ಮೀರ ಮಸೂದೆಗೆ ಬೆಂಬಲ ಸೂಚಿಸಿ ಮತದಾನ ಮಾಡಿದ್ದರು. ಪಕ್ಷದ ವಿಪ್ ಉಲ್ಲಂಘಿಸಿ ಕಲಿತಾ ಮತದಾನ ಮಾಡಿದ್ದು, ಬಳಿಕ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಿರ್ಧಾರವನ್ನು ವಿರೋಧಿಸಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿ ನರೇಂದ್ರ ಮೋದಿ ಸರಕಾರ ಐತಿಹಾಸಿಕ ಮತ್ತು ದೂರಗಾಮಿ ಪರಿಣಾಮವುಳ್ಳ ದಿಟ್ಟ ನಿರ್ಧಾರವನ್ನು ಪ್ರಕಟಿಸಿದೆ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ವಿವಾದಾತ್ಮಕ 370ನೇ ವಿಧಿಯನ್ನು ಸೋಮವಾರ ಕಿತ್ತು ಹಾಕಿರುವ ಸರಕಾರ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ. ಕೇಂದ್ರದ ಈ ನಡೆಯನ್ನು ಖಂಡಿಸಿದ್ದ ಕಾಂಗ್ರೆಸ್ ಭಾರತದ ಸಂವಿಧಾನದ ಇತಿಹಾಸದಲ್ಲಿ ಇದು ಕಪ್ಪು ದಿನ ಎಂದಿತ್ತು. ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ತಮ್ಮ ಸರಕಾರದ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆಯೇ ಕಾಂಗ್ರೆಸ್, ಪಿಡಿಪಿ ಸದಸ್ಯರು ತೀವ್ರ ಕೋಲಾಹಲ ಉಂಟುಮಾಡಿದ್ದರು. ಪಿಡಿಪಿ ಸಂಸದ ಮೀರ್ ಫಯಾಜ್ ಮತ್ತು ನಾಸಿರ್ ಅಹಮದ್ ಅವರು ಸಂವಿಧಾನದ ಪ್ರತಿ ಹರಿದುಹಾಕಲು ಯತ್ನಿಸಿದ ಘಟನೆ ಕೂಡ ನಡೆಯಿತು. ಅಷ್ಟೆ ಅಲ್ಲದೆ, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ವಿಧಿ ರದ್ದುಗೊಳಿಸುವ ಮೂಲಕ ಬಿಜೆಪಿ ಸಂವಿಧಾನದ ಕಗ್ಗೊಲೆ ಮಾಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಿಡಿಕಾರಿದ್ದರು.


from India & World News in Kannada | VK Polls https://ift.tt/2YtbLpC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...