ಪಿಓಕೆ, ಅಕ್ಸಾಯ್ ಚಿನ್ ಜಮ್ಮು ಕಾಶ್ಮೀರದ ಅವಿಭಾಜ್ಯ ಅಂಗ; ಅದಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧ: ಅಮಿತ್ ಶಾ

ಹೊಸದಿಲ್ಲಿ: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಾಯ್ ಚಿನ್ ಪ್ರದೇಶ ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದೆ ಎಂದು ಗಥಹಸಚಿವ ಲೋಕಸಭೆಯಲ್ಲಿ ಪ್ರತಿಪಾದಿಸಿದ್ದಾರೆ. ಹಾಗೂ ಜಮ್ಮು ಮತ್ತು ಕಾಶ್ಮೀರದ ಪುನಾರಚನೆ ವಿಧೇಯಕ 2019 ಅನ್ನು ಲೋಕಸಭೆಯಲ್ಲಿ ಮಂಡಿಸಿ ಮಾತನಾಡಿದ ಅವರು, ಲಡಾಖ್‌ಗೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಬೇಕೆಂಬ ದೀರ್ಘಕಾಲದ ಬೇಡಿಕೆಯನ್ನು ಈಗ ನರೇಂದ್ರ ಮೋದಿ ಸರಕಾರ ಈಡೇರಿಸಿದೆ ಎಂದು ನುಡಿದರು. 'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಅದರಲ್ಲಿ ಯಾವುದೇ ಸಂದೇಹವಿಲ್ಲ. ನಾನು ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಮಾತನಾಡುವಾಗ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಾಯ್ ಚಿನ್ ಕೂಡ ಸೇರಿಸಿಯೇ ಮಾತನಾಡುತ್ತೇನೆ. ಅದಕ್ಕಾಗಿ ನಾನು ಪ್ರಾಣತ್ಯಾಗಕ್ಕೂ ಸಿದ್ಧ' ಎಂದು ಅಮಿತ್ ಶಾ ಪ್ರತಿಪಾದಿಸಿದರು. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆಗೆ ಈ ಮೂಲಕ ತಿರುಗೇಟು ನೀಡಿದರು. ವಿಧೇಯಕದ ಮಂಡನೆಯಿಂದ ಜನತೆಯ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ ಅವರು, ಕಾಶ್ಮೀರ ಕುರಿತ ನಿರ್ಣಯವನ್ನು ಸಂಸತ್‌ನಲ್ಲಿ ಮಂಡಿಸುವುದನ್ನು ತಡೆಯುವ ಶಕ್ತಿ ಯಾವುದೂ ಇಲ್ಲ ಎಂದು ಸಾರಿದರು. 'ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಕಾಶ್ಮೀರ್ ಕಿ ಸೀಮಾ ಮೇ ಪಿಓಕೆ ಭಿ ಆತಾ ಹೈ... ಜಾನ್ ದೆ ದೇಂಗೆ ಇಸ್‌ ಕೇ ಲಿಯೆ! (ಪಿಓಕೆ ಕೂಡ ಕಾಶ್ಮೀರದ ಗಡಿಯೊಳಗೆ ಬರುತ್ತದೆ. ಅದಕ್ಕಾಗಿ ನಾವು ಪ್ರಾಣತ್ಯಾಗಕ್ಕೂ ಸಿದ್ಧ)' ಎಂದು ಶಾ ಹೇಳಿದರು. ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಸರಕಾರದ ನಿಲುವೇನು ಎಂದು ಪ್ರಶ್ನಿಸಿ ತಮ್ಮ ಭಾಷಣಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧುರಿ ಅವರಿಗೆ ಅಮಿತ್ ಶಾ ಈ ರೀತಿ ತಿರುಗೇಟು ನೀಡಿದರು. 'ನೀವು ಪಿಓಕೆ ಬಗ್ಗೆ ಯೋಚಿಸಿದಂತೆ ಕಾಣುತ್ತಿಲ್ಲ. ನೀವು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದ್ದೀರಿ. ರಾತ್ರಿ ಬೆಳಗಾಗುವುದರೊಳಗೆ ಒಂದು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತಿಸಿದ್ದೀರಿ' ಎಂದು ಅಧೀರ್ ರಂಜನ್ ಚೌಧುರಿ ಆರೋಪಿಸಿದರು. ಒಂದು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ್ದೀರಿ. ಜಮ್ಮು ಮತ್ತು ಕಾಶ್ಮೀರ ನಮ್ಮ ಆಂತರಿಕ ವಿಷಯ. ಹಾಗಿದ್ದರೂ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಕೆಲವೇ ದಿನಗಳ ಹಿಂದೆ ಕಾಶ್ಮೀರ ದ್ವಿಪಕ್ಷೀಯ ವಿಷಯ ಎಂದು ಹೇಳಿದ್ದರು. ಹಾಗಿದ್ದರೆ ಜಮ್ಮು-ಕಾಶ್ಮೀರ ಈಗಲೂ ಆಂತರಿಕ ವಿಷಯವೆ? ನಮಗೆ ಇದು ಸ್ಪಷ್ಟವಾಗಬೇಕಿದೆ. ಇಡೀ ಕಾಂಗ್ರೆಸ್ ಪಕ್ಷಕ್ಕೆ ನೀವೀಗ ಹೊಸ ಚೈತನ್ಯ ನೀಡಿದ್ದೀರಿ' ಎಂದು ಚೌಧರಿ ಕಟಕಿಯಾಡಿದರು. ಇದಕ್ಕೆ ಪ್ರತಿಯಾಗಿ ಅಮಿತ್ ಶಾ, 'ಕಾಶ್ಮೀರದ ಬಗ್ಗೆ ನಾವಲ್ಲದೆ ವಿಶ್ವಸಂಸ್ಥೆ ಕಾನೂನು ಮಾಡಬೇಕೆಂದು ನೀವು ಬಯಸುತ್ತೀರಾ?' ಎಂದು ತಿರುಗೇಟು ನೀಡಿದರು. ಆಗ ಆಡಳಿತಪಕ್ಷದ ಸದಸ್ಯರು 'ಭಾರತ್ ಮಾತಾ ಕೀ ಜೈ', ವಂದೇಮಾತರಂ ಎಂದು ಘೊಷಣೆ ಮೊಳಗಿಸಿ ಸಚಿವರಿಗೆ ಬೆಂಬಲ ಸೂಚಿಸಿದರು. ಮೋದಿ ಸರಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ 90 ದಿನದೊಳಗೆ ತನ್ನ ಮಹತ್ವದ ಭರವಸೆಯೊಂದನ್ನು ಈಡೇರಿಸಿದೆ ಎಂದು ಶಾ ಪ್ರತಿಪಾದಿಸಿದರು.


from India & World News in Kannada | VK Polls https://ift.tt/2MGGZ5B

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...