ಹೊಸದಿಲ್ಲಿ: ಒಂದಕ್ಕಿಂತಲೂ ಹೆಚ್ಚು ಹುದ್ದೆಯನ್ನು ಹೊಂದಿರುವ ವೈಯಕ್ತಿಕ ಹಿತಾಸಕ್ತಿ ಸಂಘರ್ಷದ ನಿಮಯ ಉಲ್ಲಂಘನೆಗೆ ಸಂಬಂಧಿಸಿದಂತೆ ಭಾರತದ ಮಾಜಿ ನಾಯಕ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೈತಿಕ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. ಬಿಸಿಸಿಐ ಕ್ರಮದ ವಿರುದ್ಧ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಭಾರತದ ಮಾಜಿ ನಾಯಕ , ಭಾರತೀಯ ಕ್ರಿಕೆಟ್ಗೆ ದೇವರೇ ನೆರವಾಗಬೇಕು ಎಂದಿದ್ದಾರೆ. ಇತ್ತೀಚೆಗಷ್ಟೇ ಭಾರತ ಎ ಹಾಗೂ ಅಂಡರ್ 19 ಕೋಚ್ ಆಗಿರುವ ರಾಹುಲ್ ದ್ರಾವಿಡ್ರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖಸ್ಥರಾಗಿ ನೇಮಕಗೊಳಿಸಲಾಗಿತ್ತು. ಭಾರತೀಯ ಕ್ರಿಕೆಟ್ನಲ್ಲಿ ಹೊಸ ಫ್ಯಾಶನ್ ಶುರುವಾಗಿದೆ. ಹಿತಾಸಕ್ತಿಯ ಸಂಘರ್ಷ. ಸುದ್ದಿಯಲ್ಲಿ ಉಳಿಯಲು ಉತ್ತಮ ಮಾರ್ಗ. ಭಾರತೀಯ ಕ್ರಿಕೆಟ್ಗೆ ದೇವರೇ ನೆರವಾಗಲಿ. ಬಿಸಿಸಿಐ ನೈತಿಕ ಅಧಿಕಾರಿಯಿಂದ ದ್ರಾವಿಡ್ ವೈಯಕ್ತಿಕ ಹಿತಾಸಕ್ತಿ ಸಂಘರ್ಘದ ನೋಟಿಸ್ ಪಡೆದಿರುತ್ತಾರೆ ಎಂದು ದಾದಾ ಉಲ್ಲೇಖಿಸಿದ್ದಾರೆ. ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ ಸದಸ್ಯ ಸಂಜಯ್ ಗುಪ್ತಾ ನೀಡಿದ ದೂರಿನನ್ವಯ ದ್ರಾವಿಡ್ ಅವರಿಗೆ ಬಿಸಿಸಿಐ ನೈತಿಕ ಅಧಿಕಾರಿ ನಿವೃತ್ತ ನ್ಯಾಯಮೂರ್ತಿ ಡಿಕೆ ಜೈನ್ ನೋಟಿಸ್ ಜಾರಿ ಮಾಡಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲಿಕತ್ವವನ್ನು ಹೊಂದಿರುವ ಇಂಡಿಯಾ ಸಿಮೆಂಟ್ಸ್ ಸಮೂಹದಲ್ಲಿ ದ್ರಾವಿಡ್ ಉಪಾಧ್ಯಕ್ಷ ಸ್ಥಾನವನ್ನು ಹೊಂದಿದ್ದಾರೆ. ಪ್ರಸ್ತುತ ದಾದಾ ಹೇಳಿಕೆಯನ್ನು ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಸಹ ಬೆಂಬಲಿಸಿದ್ದಾರೆ. ಅಲ್ಲದೆ ಭಾರತೀಯ ಕ್ರಿಕೆಟನ್ನು ದೇವರೇ ಕಾಪಾಡಲಿ ಎಂದಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2GRZErI