ಭಾರತೀಯ ಬೌಲಿಂಗ್ ಕೋಚ್ ರೇಸ್‌ಗಿಳಿದ ವೆಂಕಟೇಶ್ ಪ್ರಸಾದ್

ಮುಂಬಯಿ: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಸೇರಿದಂತೆ ಸಹಾಯ ಕೋಚ್ ಹುದ್ದೆಗಳಿಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು () ಅರ್ಜಿಗಳನ್ನು ಆಹ್ವಾನಿಸಿದೆ. ಇದರಂತೆ ಬೌಲಿಂಗ್ ಕೋಚ್ ಹುದ್ದೆಗೆ ಮಾಜಿ ವೇಗದ ಬೌಲರ್ ಆಗಿರುವ ಅರ್ಜಿ ಸಲ್ಲಿಸಿದ್ದಾರೆ ಎಂಬುದು ತಿಳಿದು ಬಂದಿದೆ. ಭಾರತ ತಂಡವನ್ನು 33 ಟೆಸ್ಟ್ ಹಾಗೂ 162 ಏಕದಿನ ಪಂದ್ಯಗಳಲ್ಲಿ ಪ್ರತಿನಿಧಿಸಿರುವ ಪ್ರಸಾದ್, 1990ರ ದಶಕದಲ್ಲಿ ತಂಡದ ಪ್ರಮುಖ ವೇಗಿಯ ರೂಪದಲ್ಲಿ ಹೊರಹೊಮ್ಮಿದ್ದಾರೆ. ಮಗದೋರ್ವ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಜತೆಗಿನ ಸಂಯೋಜನೆಯ ಮೂಲಕ ಅನೇಕ ಸ್ಮರಣೀಯ ಗೆಲುವುಗಳನ್ನು ಒದಗಿಸಿಕೊಟ್ಟಿದ್ದರು. 2007ರಿಂದ 2009ರ ಅವಧಿಯಲ್ಲಿ ಪ್ರಸಾದ್, ಭಾರತೀಯ ಬೌಲಿಂಗ್ ಹುದ್ದೆಯನ್ನು ನಿರ್ವಹಿಸಿದ್ದರು. ತದಾ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ನಾಲ್ಕು ವರ್ಷ), ರಾಯಲ್ ಚಾಲೆಂಜರ್ಸ್ ಬೆಂಗಳೂರು (ಎರಡು ವರ್ಷ) ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ (2018ರಲ್ಲಿ) ಬೌಲಿಂಗ್ ಕೋಚ್ ಹುದ್ದೆಯನ್ನು ನಿಭಾಯಿಸಿದ್ದರು. ಮೂರು ವರ್ಷಗಳಷ್ಟು ಕಾಲ ಕಿರಿಯ ತಂಡದ ರಾಷ್ಟ್ರೀಯ ಮುಖ್ಯ ಆಯ್ಕೆಗಾರರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಕಾಲಾವಧಿಯಲ್ಲೇ ಭಾರತ ತಂಡವು ಇಂಗ್ಲೆಂಡ್ ನೆಲದಲ್ಲಿ 2007ರಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ದಾಖಲಿಸಿತ್ತು. ಸದ್ಯ ಭರತ್ ಅರುಣ್ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಆಗಿದ್ದಾರೆ. ಅಲ್ಲದೆ ಹೊಸ ಕೋಚ್‌ಗಾಗಿನ ಸಂದರ್ಶನವು ಆಗಸ್ಟ್ 13ರಿಂದ ಆರಂಭಗೊಳ್ಳುವ ಸಾಧ್ಯತೆಯಿದೆ. ಬಿಸಿಸಿಐ ಹೊಸ ಸಾಂವಿಧಾನಿಕ ನಿಯಮಗಳ ಪ್ರಕಾರ ಸಹಾಯಕ ಕೋಚ್‌ಗಳ ಸಂದರ್ಶನವನ್ನು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿ ನಡೆಸಲಿದೆ. ಹಾಗಾಗಿ ಮುಖ್ಯ ಕೋಚ್ ಸಂದರ್ಶನ ಮಾಡಲಿರುವ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಸಹಾಯಕ ಕೋಚ್‌ಗಳ ಸಂದರ್ಶನವನ್ನು ಮಾಡಲಿದ್ದಾರೆಯೇ ಎಂಬುದು ತಿಳಿದು ಬಂದಿಲ್ಲ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2yuf68B

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...