ಲಷ್ಕರೆ ತಯ್ಬಾ ಉಗ್ರರ ನುಸುಳುವಿಕೆ: ತಮಿಳುನಾಡು, ಕೇರಳದಲ್ಲಿ ಹೈ ಅಲರ್ಟ್‌

ಚೆನ್ನೈ: ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಲಷ್ಕರೆ ತಯ್ಬಾದ ಉಗ್ರರು ದಕ್ಷಿಣ ರಾಜ್ಯಗಳ ಮೂಲಕ ಒಳ ನುಸುಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ಮತ್ತು ಕೇರಳದಲ್ಲಿ ಘೋಷಿಸಲಾಗಿದೆ. ಲಷ್ಕರೆ ತಯ್ಬಾದ ಆರು ಉಗ್ರರು ತಮಿಳುನಾಡು, ಮೂಲಕ ಪ್ರವೇಶಿಸಿದ್ದಾರೆ. ಆರು ಮಂದಿಯ ಪೈಕಿ ಒಬ್ಬ ಪಾಕಿಸ್ತಾನಿ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ತಮಿಳುನಾಡು, ಕೇರಳದಲ್ಲಿ ಭಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಈ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ ಎಂದು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಂಶಯಾಸ್ಪದ ವ್ಯಕ್ತಿಗಳು, ಸಂಶಯಾಸ್ಪದ ವಸ್ತುಗಳನ್ನು ಕಂಡ ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್‌ ಅಧಿಕಾರಿಗಳು ಮನವಿ ಮಾಡಿದ್ದಾರೆ. ತಮಿಳುನಾಡಿನ ಪ್ರಮುಖ ನಗರಗಳಾದ ಚೆನ್ನೈ, ಕೊಯಮತ್ತೂರು, ವೆಲ್ಲೂರು ಸೇರಿದಂತೆ ಹಲವಾರು ಕಡೆಗಳಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲು ಸೂಚಿಸಲಾಗಿದೆ. ಕೊಯಮತ್ತೂರಿನ ಜನನಿಬಿಡ ಪ್ರದೇಶಗಳು, ಮಾಲ್‌ಗಳು, ಹೋಟೆಲ್‌, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಚಿತ್ರಮಂದಿರಗಳು, ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. 2 ಸಾವಿರಕ್ಕೂ ಹೆಚ್ಚು ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ರಾಮೇಶ್ವರಂ, ನಾಗಪಟ್ಟಿಣಂ, ವೇಲಾಂಕಣಿಯಲ್ಲೂ ಭಾರಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇದೇ ರೀತಿ ಕೇರಳದಲ್ಲಿಯೂ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲು ಸೂಚಿಸಲಾಗಿದೆ. ಈ ನಡುವೆ ಕೊಯಮತ್ತೂರಿನಲ್ಲಿ ಐಸಿಸ್‌ ಜತೆ ನಂಟು ಹೊಂದಿದ್ದವನ ಬಂಧಿಸಿದ ಪೊಲೀಸರು ಮಹತ್ವದ ಮಾಹಿತಿ ಪಡೆದುಕೊಂಡಿದ್ದಾರೆ. ಒಟ್ಟಾರೆಯಾಗಿ ದಕ್ಷಿಣ ರಾಜ್ಯಗಳ ಮೂಲಕ ಉಗ್ರರು ಒಳ ನುಸುಳಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.


from India & World News in Kannada | VK Polls https://ift.tt/2ZkjCWd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...