ಆ್ಯಂಟಿಗುವಾ: ಆತಿಥೇಯ ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ನಲ್ಲಿ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವೈಫಲ್ಯವನ್ನು ಅನುಭವಿಸಿದ್ದಾರೆ. ಟಾಸ್ ಗೆದ್ದ ವೆಸ್ಟ್ಇಂಡೀಸ್ ನಾಯಕ ಜೇಸನ್ ಹೋಲ್ಡರ್ ಮೊದಲು ಕ್ಷೇತ್ರರಕ್ಷಣೆ ಆಯ್ಕೆ ಮಾಡಿದ್ದರು. ನಾಯಕನ ಆಯ್ಕೆ ಸರಿಯೆಂದು ಸಾಬೀತು ಮಾಡಿದ ಕೆಮರ್ ರೂಚ್ ಇನ್ನಿಂಗ್ಸ್ನ ಐದನೇ ಓವರ್ನಲ್ಲೇ (5) ಹಾಗೂ (2) ಹೊರದಬ್ಬುವ ಮೂಲಕ ಡಬಲ್ ಆಘಾತ ನೀಡಿದರು. ಕೆಎಲ್ ರಾಹುಲ್ ಜತೆ ಇನ್ನಿಂಗ್ಸ್ ಆರಂಭಿಸಿದ ಮಯಾಂಕ್ ಅವರ ಮೇಲೆ ಅತೀವ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು. ಆದರೆ ಹೊಸ ಚೆಂಡಿನ ದಾಳಿಯನ್ನು ಎದುರಿಸುವಲ್ಲಿ ವಿಫಲವಾಗಿದ್ದಾರೆ. ಇನ್ನೊಂದೆಡೆ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಪೂಜಾರಗೆ ಅದೇ ಪ್ರದರ್ಶನ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಅತ್ತ ನಾಯಕ ಸಹ ಪೆವಿಲಿಯನ್ ಸೇರುವುದರೊಂದಿಗೆ 7.5 ಓವರ್ಗಳಲ್ಲೇ 25 ರನ್ನಿಗೆ ಮೂರು ವಿಕೆಟುಗಳನ್ನು ಕಳೆದುಕೊಂಡ ಭಾರತ ತೀವ್ರ ಸಂಕಷ್ಟಕ್ಕೊಳಗಾಯಿತು. 12 ಎಸೆತಗಳನ್ನು ಎದುರಿಸಿದ ಕೊಹ್ಲಿ ಎರಡು ಬೌಂಡರಿಗಳಿಂದ 9 ರನ್ ಗಳಿಸಿದರು. ಕೊಹ್ಲಿ ಹೊರಗಟ್ಟಿದ ಶನಾನ್ ಗೇಬ್ರಿಯಲ್ ಮಿಂಚಿನ ದಾಳಿ ಸಂಘಟಿಸಿದರು. ತದಾ ಬಳಿಕ ಜತೆಗೂಡಿದ ಕೆಎಲ್ ರಾಹುಲ್ ಹಾಗೂ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಿದರು. ಪ್ರಥಮ ದಿನದ ಊಟದ ವಿರಾಮದ ಹೊತ್ತಿಗೆ ಭಾರತ ಮೂರು ವಿಕೆಟ್ ನಷ್ಟಕ್ಕೆ 68 ರನ್ ಗಳಿಸಿತ್ತು. ರಾಹುಲ್ 37 ಹಾಗೂ ರಹಾನೆ 10 ರನ್ ಗಳಿಸಿ ಕ್ರೀಸಿನಲ್ಲಿದ್ದರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2P8pyh6