ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ದೇವಾಲಯವೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಭಾನುವಾರ ಸಂಜೆ ಈ ದುರ್ಷಟನೆ ನಡೆದಿದೆ. ದೇವಾಲಯದ ಆವರಣದಲ್ಲಿ ಪತ್ತೆಯಾದ ಅನುಮಾನಾಸ್ಪದ ಪೆಟ್ಟಿಗೆಯ ಪರಿಶೀಲನೆ ವೇಳೆ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಸಂಜೆ ದೇಗುಲದ ಆವರಣದಲ್ಲಿ ಅನುಮಾನಾಸ್ಪದ ಪೆಟ್ಟಿಗೆಯೊಂದು ಪತ್ತೆಯಾಗಿದ್ದು, ಅದನ್ನು ಪರಿಶೀಲಿಸುವ ಸಂದರ್ಭದಲ್ಲಿ ದಿಢೀರ್ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ವಿಧಿವಿಜ್ಞಾನ ತಂಡದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
from India & World News in Kannada | VK Polls https://ift.tt/2ZtU9po