ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ (66) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜೇಟ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಅರುಣ್ ಜೇಟ್ಲಿ ವಿತ್ತ ಸಚಿವರಾಗಿ ಅನೇಕ ಗಮನಾರ್ಹ ಯೋಜನೆಗಳನ್ನು ಜಾರಿಗೆ ತಂದಿದ್ದರು. ಇದೀಗ ಕ್ರೀಡಾ ಲೋಕದ ಪ್ರಮುಖರು ಜೇಟ್ಲಿ ನಿಧನಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. ದಿಲ್ಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿಯೂ ಅರುಣ್ ಜೇಟ್ಲಿ ಸೇವೆಯನ್ನು ಸಲ್ಲಿಸಿದ್ದರು. ಈ ಮೂಲಕ ಭಾರತೀಯ ಕ್ರಿಕೆಟಿಗರೊಂದಿಗೂ ಉತ್ತಮ ಒಡನಾಟವನ್ನು ಹೊಂದಿದ್ದರು. ಭಾರತೀ ಕ್ರಿಕೆಟ್ ಏಳಿಗೆಗಾಗಿ ಅರುಣ್ ಜೇಟ್ಲಿ ಪ್ರಯತ್ನಿಸಿದ್ದರು. ಇದುವೇ ಮಾಜಿ ಕ್ರಿಕೆಟಿಗರಾದ ಹಾಗೂ ಅವರಲ್ಲೂ ಹೆಚ್ಚಿನ ಪ್ರಭಾವವನ್ನು ಬೀರಲು ಕಾರಣವಾಗಿದೆ. ಗಂಭೀರ್ ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ಅರುಣ್ ಜೇಟ್ಲಿ ತಮಗೆ ಪಿತೃ ಸಮಾನ ಎಂದು ಹೇಳುವ ಮೂಲಕ ಗೌರವ ಸೂಚಿಸಿದ್ದಾರೆ. ವೀರು ತಮ್ಮ ಸಂದೇಶದಲ್ಲಿ ಭಾರತವನ್ನು ಪ್ರತಿನಿಧಿಸಲು ಜೇಟ್ಲಿ ಕಾರಣವಾಗಿದ್ದಾರೆ ಎಂದಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/30w7n6q