ಅನೇಕ ಅಭಿಪ್ರಾಯಗಳಿವೆ; ತಂಡದ ಹಿತಾಸಕ್ತಿಗೆ ಮೊದಲ ಆದ್ಯತೆ ಎಂದ ವಿರಾಟ್ ಕೊಹ್ಲಿ

ನಾರ್ತ್ ಸೌಂಡ್: ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಆದರೆ ಇವೆಲ್ಲವನ್ನು ಮೆಟ್ಟಿ ನಿಂತಿರುವ ಪಡೆ ಕೇವಲ ನಾಲ್ಕು ದಿನಗಳ ಅಂತರದಲ್ಲೇ 318 ರನ್ ಅಂತರದಿಂದ ಆತಿಥೇಯ ತಂಡವನ್ನು ಬಗ್ಗು ಬಡಿದಿದೆ. ಈ ಬಗ್ಗೆ ಪಂದ್ಯದ ಬಳಿಕ ಪ್ರತಿಕ್ರಿಯಿಸಿರುವ ಕೊಹ್ಲಿ, ಅನೇಕ ಅಭಿಪ್ರಾಯಗಳಿವೆ. ಆದರೆ ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅತ್ಯುತ್ತಮ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು. ನಾವೊಂದು ಗುಂಪಾಗಿ ಚರ್ಚೆ ಮಾಡಿದ ಬಳಿಕ ತಂಡಕ್ಕಾಗಿ ಅತ್ಯುತ್ತಮ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಆಡುವ ಬಳಗದ ಬಗ್ಗೆ ಅನೇಕ ಅಭಿಪ್ರಾಯಗಳಿರುತ್ತದೆ. ಆದರೆ ಅಂತಿಮವಾಗಿ ತಂಡದ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದರು. ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಹನುಮ ವಿಹಾರಿ ಆಯ್ಕೆ ಮಾಡಿರುವುದು ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ ನಾಯಕನ ನಿರ್ಧಾರವನ್ನು ಸಮರ್ಥಿಸಿರುವ ವಿಹಾರಿ 93 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದ್ದರು. ಇದನ್ನು ಬೊಟ್ಟು ಮಾಡಿರುವ ವಿರಾಟ್, ಅರೆಕಾಲಿಕ ಆಫ್ ಸ್ಪಿನ್ ದಾಳಿಯನ್ನು ವಿಹಾರಿ ಮಾಡಬಲ್ಲರು ಎಂದಿದ್ದಾರೆ. ಏತನ್ಮಧ್ಯೆ ಜಸ್ಪ್ರೀತ್ ಬುಮ್ರಾ ಅವರ ಕೆಲಸದೊತ್ತಡವನ್ನು ನಿಭಾಯಿಸುವುದು ಅತಿ ಮುಖ್ಯ ಎಂಬುದನ್ನು ವಿರಾಟ್ ಒತ್ತಿ ಹೇಳಿದರು. ಈ ನಿಟ್ಟಿನಲ್ಲಿ ವಿಂಡೀಸ್ ವಿರುದ್ಧ ಸೀಮಿತ ಓವರ್‌ಗಳ ಸರಣಿಯಲ್ಲಿ ಭಾಗವಹಿಸಿಲ್ಲ ಎಂದರು. ಕಠಿಣ ಪಿಚ್‌ನಲ್ಲಿ ಅಜಿಂಕ್ಯ ರಹಾನೆ ಉತ್ತಮ ಬ್ಯಾಟಿಂಗ್ ಮಾಡಿದರು. ಕೆಎಲ್ ರಾಹುಲ್ ಸಹ ಉಪಯುಕ್ತ ಇನ್ನಿಂಗ್ಸ್ ಕಟ್ಟಿದರು. ಜಸ್ಪ್ರೀತ್ ಬುಮ್ರಾ ಹಾಗೂ ಇಶಾಂತ್ ಶರ್ಮಾ ಬೌಲಿಂಗ್‌ನಲ್ಲಿ ಮಿಂಚಿದರು ಎಂದು ನುಡಿದರು. ತಂಡದೆಲ್ಲ ಆಟಗಾರರ ಸಾಂಘಿಕ ಪ್ರಯತ್ನದ ಹೊರತಾಗಿ ಯಶಸ್ಸು ಗಳಿಸುವುದು ಅಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಆಟಗಾರರು ಜವಾಬ್ದಾರಿಯನ್ನು ವಹಿಸಿ ವೃತ್ತಿಪರ ಆಟವನ್ನು ಆಡಿದರು. ಇದರಿಂದಾಗಿ ನಾಯಕನ ಕೆಲಸವು ಸುಲಭವಾಗುತ್ತದೆ ಎಂದು ವಿರಾಟ್ ಸೇರಿಸಿದರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2ZACock

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...