ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಸಂವಿಧಾನದ 370ನೇ ವಿಧಿಯನ್ನು ತೆಗೆದುಹಾಕುವ ಕೇಂದ್ರ ಸರಕಾರದ ನೀತಿಯನ್ನು ಪಾಕಿಸ್ತಾನ ವಿರೋಧಿಸಿದೆ. ಪಾಕಿಸ್ತಾನದ ಮಾಜಿ ನಾಯಕ ಈ ಬಗ್ಗೆ ಬಹಿರಂಗವಾಗಿಯೇ ಮಾತನಾಡಿಕೊಂಡಿದ್ದಾರೆ. ವಿಶ್ವಸಂಸ್ಥೆ ನಿರ್ಣಯದ ಪ್ರಕಾರ ಕಾಶ್ಮೀರಿಗಳಿಗೆ ಹಕ್ಕುಗಳನ್ನು ನೀಡಬೇಕು. ನಮ್ಮಲ್ಲರಂತೆ ಸ್ವಾತಂತ್ರ್ಯದ ಹಕ್ಕು. ವಿಶ್ವಸಂಸ್ಥೆ ಏಕೆ ರಚಿಸಿದೆ ಮತ್ತೆ ಯಾಕೆ ನಿದ್ರಿಸುತ್ತಿದೆ? ಮಾನವೀಯತೆಯ ವಿರುದ್ಧ ಕಾಶ್ಮೀರದಲ್ಲಿ ನಡೆಯುತ್ತಿರುವ ಅಪ್ರಚೋದಿತ ಆಕ್ರಮಣವನ್ನು ಗಮನಿಸಬೇಕು. ಅಮೆರಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಬೇಕಿದೆ ಎಂದು ಆಫ್ರದಿ ಕರೆ ನೀಡಿದ್ದಾರೆ. ಆಫ್ರಿದಿ ಹೇಳಿಕೆಗೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಟೀಮ್ ಇಂಡಿಯಾ ವಿಶ್ವಕಪ್ ವಿಜೇತ ಹೀರೊ ಹಾಗೂ ಸಂಸದ , ಅಲ್ಲಿ ಅಪ್ರಚೋದಿತ ಆಕ್ರಮಣ ಹಾಗೂ ಮಾನವೀಯತೆಯ ವಿರುದ್ಧ ಅಪರಾಧಗಳು ನಡೆಯುತ್ತಿದೆ. ಇದನ್ನು ಉಲ್ಲೇಖಿಸಿದ್ದಕ್ಕೆ ನಾವರನ್ನು ಶ್ಲಾಘಿಸಬೇಕು. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇವೆಲ್ಲವೂ ನಡೆಯುತ್ತಿದೆ ಎಂದು ಹೇಳಲು ಮರೆತಿದ್ದಾರೆ. ಚಿಂತಿಸಬೇಡಿ, ನಾವದನ್ನು ಇತ್ಯರ್ಥಗೊಳಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ. ಕ್ರಿಕೆಟ್ ಆಡುವ ಕಾಲಘಟ್ಟದಿಂದಲೇ ಆಫ್ರಿದಿ ಹಾಗೂ ಗಂಭೀರ್ ನಡುವೆ ನಿಕಟ ಪೈಪೋಟಿ ಏರ್ಪಟ್ಟಿತ್ತು. ನಿವೃತ್ತಿ ಜೀವನದ ಬಳಿಕವೂ ಇದು ಮುಂದುವರಿದಿದೆ. ಆಫ್ರಿದಿ ತಮ್ಮ ಆತ್ಮಚರಿತ್ರೆಯಲ್ಲಿ ಗಂಭೀರ್ ಬಗ್ಗೆ ಕೆಟ್ಟದಾಗಿ ಬರೆದುಕೊಂಡಿದ್ದರು. ಇವೆಲ್ಲಕ್ಕೂ ಗಂಭೀರ್ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2yIweI2