ವಿಂಡೀಸ್ ಸರಣಿಯಲ್ಲಿ ಕನ್ನಡಿಗರ ಮಿಂಚು

ಟ್ರಿನಿಡಾಡ್: ಭಾರತದ ಹಿರಿಯ ಕ್ರಿಕೆಟ್ ತಂಡವು ವೆಸ್ಟ್‌ಇಂಡೀಸ್ ವಿರುದ್ಧ ಟ್ವೆಂಟಿ-20, ಏಕದಿನ ಹಾಗೂ ಟೆಸ್ಟ್ ಸರಣಿಗಳಿಗೆ ಸಜ್ಜಾಗುತ್ತಿದೆ. ಅತ್ತ ಈಗಾಗಲೇ ವಿಂಡೀಸ್ ಪ್ರವಾಸದಲ್ಲಿರುವ ತಂಡವು ಅದ್ಭುತ ನಿರ್ವಹಣೆಯನ್ನು ನೀಡುತ್ತಿದೆ. ಈಗಾಗಲೇ ಐದು ಪಂದ್ಯಗಳ ಅನಧಿಕೃತ ಏಕದಿನ ಸರಣಿಯಲ್ಲಿ ವೆಸ್ಟ್‌ಇಂಡೀಸ್ ಎ ತಂಡದ ವಿರುದ್ಧ 4-1ರ ಅಂತರದ ಅಧಿಕಾರಯುತ ಗೆಲುವು ದಾಖಲಿಸಿರುವ ಭಾರತ ಎ ತಂಡವೀಗ ಟೆಸ್ಟ್ ಸರಣಿ ಗೆಲುವಿನತ್ತ ಮುನ್ನಡೆದಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಅಧಿಕಾರಯುತ ಗೆಲುವು ದಾಖಲಿಸಿರುವ ಭಾರತ ಎ ತಂಡವು ದ್ವಿತೀಯ ಅನಧಿಕೃತ ಟೆಸ್ಟ್‌ನಲ್ಲೂ ಮೊದಲ ಇನ್ನಿಂಗ್ಸ್ ಹಿನ್ನಡೆಯ ಹೊರತಾಗಿಯೂ ಗೆಲುವಿನತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕದ ಹಾಗೂ ಭಾರತದ ಅಧಿಕಾರಯುತ ನಿರ್ವಹಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ವಿಂಡೀಸ್ ಎ ತಂಡದ 318 ರನ್‌ಗಳಿಗೆ ಉತ್ತರವಾಗಿ ಭಾರತ ಎ 190 ರನ್‌ಗಳಿಗೆ ಸರ್ವಪತನವನ್ನು ಕಂಡಿತ್ತು. ಈ ಮೂಲಕ 128 ರನ್‌ಗಳ ಹಿನ್ನಡೆಗೊಳಗಾಗಿತ್ತು. ಬಳಿಕ ಕೇವಲ 17 ರನ್ ಅಂತರದಲ್ಲಿ ಐದು ವಿಕೆಟ್ ಪಡೆದ ಕೆ ಗೌತಮ್ ನಿಖರ ದಾಳಿಯ ನೆರವಿನಿಂದ ವಿಂಡೀಸ್ ತಂಡವನ್ನು 149 ರನ‌್‌ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು. ಬಳಿಕ 278 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟುತ್ತಿರುವ ಭಾರತ ಎ ತಂಡವು ಮೂರನೇ ದಿನದಂತ್ಯಕ್ಕೆ ಮಯಾಂಕ್ ಅಗರ್ವಾಲ್ (81) ಹಾಗೂ ಪ್ರಿಯಾಂಕ್ ಪಂಚಲ್ (68) ಆಕರ್ಷಕ ಅರ್ಧಶತಕಗಳ ನೆರವಿನಿಂದ ಮೂರು ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿದೆ. ಇದೀಗ ಏಳು ವಿಕೆಟ್ ಬಾಕಿ ಉಳಿದಿರುವಂತೆಯೇ ಗೆಲುವಿಗಾಗಿ ಇನ್ನು 93 ರನ್ ಗಳಿಸಬೇಕಾದ ಅಗತ್ಯವಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/31ejy7I

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...