ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಸ್ಥಾನದಿಂದ ಮಾಜಿ ಆಟಗಾರ ಅವರನ್ನು ತೆರವುಗೊಳಿಸಲಾಗಿದೆ. ಆದರೂ ಭಾರತ ಕ್ರಿಕೆಟ್ ತಂಡದ ನಾಯಕ ಹಾಗೂ ಸಂಜಯ್ ಬಂಗಾರ್ ಮತ್ತೆ ಜತೆಯಾಗಿ ಕಾರ್ಯ ನಿರ್ವಹಿಸುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ನೇಮಕಗೊಳ್ಳುವ ಸಾಧ್ಯತೆಯಿದೆ. ಈ ಮೂಲಕ ಕೊಹ್ಲಿ ಹಾಗೂ ಬಂಗಾರ್ ಮಗದೊಮ್ಮೆ ಒಂದಾಗಲಿದ್ದಾರೆ. ಈ ಮೊದಲು ಫ್ರಾಂಚೈಸಿಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಾಗಿತ್ತು. ಮುಖ್ಯ ಕೋಚ್ ಸ್ಥಾನಕ್ಕೆ ಗ್ಯಾರಿ ಕರ್ಸ್ಟನ್ ಬದಲು ಆಸ್ಟ್ರೇಲಿಯಾ ಮಾಜಿ ಆಟಗಾರ ಸೈಮನ್ ಕ್ಯಾಟಿಚ್ ನೇಮಕಗೊಳಿಸಲಾಗಿದೆ. ಹಾಗೆಯೇ ಕ್ರಿಕೆಟ್ ಚಟುವಟಿಕೆಯ ನಿರ್ದೇಶಕರಾಗಿ ನ್ಯೂಜಿಲೆಂಡ್ನ ಮಾಜಿ ಆಟಗಾರ ಮೈಕ್ ಹೆಸ್ಸನ್ ನೇಮಕಗೊಳಿಸಲಾಗಿದೆ. ಐಪಿಎಲ್ನಲ್ಲಿ ಆರ್ಸಿಬಿ ತಂಡವು ಇನ್ನಷ್ಟೇ ಚೊಚ್ಚಲ ಕಿರೀಟವನ್ನು ಗೆಲ್ಲಬೇಕಿದೆ. ಇದರಂತೆ ಕೋಟಿಂಗ್ ಪ್ಯಾನೆಲ್ನಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಾಗಿದೆ. ಸಂಜಯ್ ಬಂಗಾರ್ ಕೂಡಾ ಆರ್ಸಿಬಿ ಪಾಳೇಯವನ್ನು ಸೇರಿಕೊಂಡರೆ ಮತ್ತಷ್ಟು ಬಲಿಷ್ಠವಾಗುವುದು ಖಚಿತ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2NpVdZ8