ಮಂಗಳೂರು: ವಾಟ್ಸಪ್ ಸ್ಟೇಟಸ್ ಒಂದು ಮಾರಣಾಂತಿಕ ದಾಳಿಗೆ ಕಾರಣವಾದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಉಳ್ಳಾಲದಲ್ಲಿ ಭಾನುವಾರ ರಾತ್ರಿ ಈ ಕೃತ್ಯ ನಡೆದಿದ್ದು ಕಾರಿನಲ್ಲಿ ಬಂದ ತಂಡವೊಂದು ಗುಂಡು ಹಾರಾಟ ನಡೆಸಿದ ಪರಿಣಾಮ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಉಳ್ಳಾಲದ ಕಿಲೆಂಜೂರು ಇರ್ಷಾದ್(17) ಗಾಯಗೊಂಡವರು. ರಾಜಕೀಯ ಪಕ್ಷದ ಮುಖಂಡ ಸೊಹೈಲ್ ಕಂದಕ್ ಮತ್ತು ತಂಡ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ರಾಜಕೀಯಕ್ಕೆ ಸಂಬಂಧಿಸಿದ ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ಮಾತುಕತೆಗಾಗಿ ಕಂದಕ್ ಸೇರಿದಂತೆ 7ಮಂದಿಯ ತಂಡ ಕಿಲೇರಿಯಾ ಯುವಕರ ಬಳಿ ಮಾತುಕತೆಗೆ ತೆರಳಿತ್ತು. ಈ ಸಂದರ್ಭ ತಂಡಗಳ ಮಧ್ಯೆ ವಾಗ್ವಾದ ನಡೆದಿದ್ದು, ಬಳಿಕ ಗುಂಡು ಹಾರಾಟ ನಡೆಯಿತೆಂದು ತಿಳಿದು ಬಂದಿದೆ. ಇದರ ಪರಿಣಾಮ ಇರ್ಷಾದ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಶೋಧ ನಡೆಯುತ್ತಿದೆ.
from India & World News in Kannada | VK Polls https://ift.tt/2AFsiZs