ಮಲಾಡ: ಬಿಹಾರದ ಕತಿಹಾರ್ ಪ್ರದೇಶದಲ್ಲಿರುವ ಮಹಾನಂದ್ ನದಿಯಲ್ಲಿ ದೋಣಿ ಮುಳುಗಿ 7 ಜನ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದಾರೆಂದು ವರದಿಯಾಗಿದೆ. ಗುರುವಾರ ರಾತ್ರಿ ಮಹಾನಂದ್ ನದಿಯಲ್ಲಿ ದೋಣಿ ಸ್ಪರ್ಧೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಯವರೆಗೂ 28 ಜನರನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರ ಶೋಧ ಕಾರ್ಯ ನಡೆಯುತ್ತಿದೆ. ದೋಣಿಯಲ್ಲಿದ್ದ ಜನರು ಪಶ್ಚಿಮ ಬಂಗಾಳದ ಮಲಾಡನಿಂದ ಬಿಹಾರದ ಕತಿಹಾರ್ ಪ್ರದೇಶಕ್ಕೆ ಪ್ರಯಾಣ ಬೆಳೆಸಿದ್ದರು. ಈ ಸಂದರ್ಭದಲ್ಲಿ ದೋಣಿ ಮುಳುಗಡೆಯಾಗಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ದೌಡಾಯಿಸಿದ್ದು, ಕಾರ್ಯಾಚರಣೆ ಆರಂಭಿಸಿದೆ. ದೋಣಿ ದುರಂತಕ್ಕೆ ಕಾರಣ ಹಾಗೂ ದುರಂತದಲ್ಲಿ ಸಂಭವಿಸಿರುವ ಸಾವು ನೋವಿನ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ, ದೊಡ್ಡ ಮಟ್ಟದ ದುರಂತ ಸಂಭವಿಸದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಂಭವವಿದೆ ಎಂದು ವರದಿಯಾಗಿದೆ. ಕಳೆದ ತಿಂಗಳು ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೋದಾವರಿ ನದಿಯಲ್ಲಿ ಭೀಕರ ದೋಣಿ ದುರಂತ ಸಂಭವಿಸಿ ಕನಿಷ್ಠ 15 ಜನ ಸಾವನ್ನಪ್ಪಿದ್ದರು. ಅನೇಕರು ಕಣ್ಮರೆಯಾಗಿದ್ದರು. ಗಂಡಿ ಪೋಚಮ್ಮ ದೇವಾಲಯದ ದರ್ಶನ ಮುಗಿಸಿ ಪಾಪಿಕೊಂಡಲು ಪ್ರವಾಸಿ ತಾಣದತ್ತ ಹೊರಟಿದ್ದ ವೇಳೆ ಮಾರ್ಗ ಮಧ್ಯ ದೋಣಿ ಮುಗಿಚಿ ಈ ದುರಂತ ಸಂಭವಿಸಿತ್ತು.
from India & World News in Kannada | VK Polls https://ift.tt/2oLS63x