ಕಾಣದ ಕೈಗಳು ಯಡಿಯೂರಪ್ಪನವರ ಕೈ ಕಟ್ಟಿ ಹಾಕಿವೆ: ಜಯಮೃತ್ಯುಂಜಯ ಸ್ವಾಮೀಜಿ

ಬಾಗಲಕೋಟ: ಕಾಣದ ಶಕ್ತಿಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಟ್ಟಿ ಹಾಕುತ್ತಿವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಕೇಂದ್ರದಲ್ಲಿ ಬೇರೆ ಸರಕಾರವಿತ್ತು. ಅಂತಹ ಸಂದರ್ಭದಲ್ಲೇ ಅವರು ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ಅವರ ಕಾರ್ಯ ನೋಡಿ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅವರಲ್ಲಿ ಅಂಥ ಶಕ್ತಿ ಮತ್ತು ಧೈರ್ಯ ಇದೆ ಎಂದು ಹೇಳಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಉತ್ತರ ಕರ್ನಾಟಕದ ಜನರ ಬೆಂಬಲವೇ ಹೆಚ್ಚಾಗಿದೆ. 2009ರಲ್ಲಿ ಪ್ರವಾಹ ಬಂದಾಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಿದ್ದರು. ಆಗ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದರು. ಆದರೆ, ಈಗ ಯಡಿಯೂರಪ್ಪ ಅವರ ಮೇಲೆ ಉತ್ತರ ಕರ್ನಾಟಕದ ಜನ ಅಸಮಾಧಾನಗೊಳ್ಳಲಿ ಎಂದು ಪರಿಹಾರ ಬಿಡುಗಡೆ ಮಾಡದೇ ಕೇಂದ್ರ ಸರಕಾರ ಪಿತೂರಿ ಮಾಡುತ್ತಿದೆ. ಇದಕ್ಕಾಗಿಯೇ ಬಸವರಾಜ ಯತ್ನಾಳ್ ಅವರು ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ಪರ ಧ್ವನಿ ಎತ್ತಿದ್ದಾರೆ ಎಂದರು. ದೇಶ ಉಳಿಯಬೇಕು, ಅಭಿವೃದ್ಧಿಯಾಬೇಕೆಂದು ರಾಜ್ಯದಿಂದ ಕೇಂದ್ರ ಸರಕಾರಕ್ಕೆ ತೆರಿಗೆ ಕಟ್ಟುತ್ತಿದ್ದೇವೆ. ಯಾವುದೇ ರಾಜ್ಯದಲ್ಲಿ ಪ್ರಕೃತಿ ವಿಕೋಪವಾದರೆ, ಮಾನವೀಯತೆ ದೃಷ್ಟಿಯಿಂದ ಕೇಂದ್ರ ಸ್ಪಂದಿಸಬೇಕು. ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಪ್ರವಾಹ ಬಂದರೆ, ಕೇಂದ್ರ ಸರಕಾರ ಸ್ಪಂದಿಸುತ್ತೆ. ಆದರೆ, ಕರ್ನಾಟಕದ ಬಗ್ಗೆ ಯಾಕೆ ನಿರ್ಲಕ್ಷ ಎಂದು ಸ್ವಾಮೀಜಿ ಅವರು ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ವಿಶ್ವ ಗುರು ಮಾಡಲು ಹೊರಟಿದ್ದಾರೆ. ಕೇವಲ ಉತ್ತರ ಭಾರತವನ್ನು ವಿಶ್ವ ಗುರು ಮಾಡಿದರೆ ಸಾಲದು. ಕರ್ನಾಟಕ ಜನರ ಸಮಸ್ಯೆ ಬಗೆಹರಿಸಿದಾಗ ಮಾತ್ರ ಭಾರತ ವಿಶ್ವ ಗುರುವಾಗಲು ಸಾಧ್ಯ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ವಿಶ್ವ ಗುರು ಮಾಡಲು ಹೊರಟಿದ್ದಾರೆ. ಕೇವಲ ಉತ್ತರ ಭಾರತವನ್ನು ವಿಶ್ವ ಗುರು ಮಾಡಿದರೆ ಸಾಲದು. ಕರ್ನಾಟಕ ಜನರ ಸಮಸ್ಯೆ ಬಗೆಹರಿಸಿದಾಗ ಮಾತ್ರ ಭಾರತ ವಿಶ್ವ ಗುರುವಾಗಲು ಸಾಧ್ಯ ಎಂದು ಹೇಳಿದರು. ಪ್ರಧಾನಿ ಮೋದಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಈ ಸಂಬಂಧ ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ 25 ಸಂಸದರು ದನಿ ಎತ್ತದಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರು ಪ್ರಧಾನಿ ಬಳಿ ಹೋಗಿ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿ. ಸಾಧ್ಯವಾದರೆ ಕೇಂದ್ರ ಸರಕಾರದಿಂದ ಪರಿಹಾರ ತನ್ನಿ, ಇಲ್ಲ ರಾಜೀನಾಮೆ ಕೊಟ್ಟು ನೆರೆ ಸಂತ್ರಸ್ತರ ಪರ ಹೋರಾಟಕ್ಕೆ ಬನ್ನಿ ಎಂದು ಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ಕೇಂದ್ರದ ಪರಿಹಾರ ಅಗತ್ಯ ಇಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, ಬೇಜವಾಬ್ದಾರಿ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ಅವರು ಈ ಕೂಡಲೇ ಉತ್ತರ ಕರ್ನಾಟಕ ಭಾಗದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.


from India & World News in Kannada | VK Polls https://ift.tt/2mPAZwU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...