ಬಂಡೀಪುರ ರಾತ್ರಿ ಸಂಚಾರಕ್ಕೆ ಅವಕಾಶ ನೀಡಲ್ಲ: ಯಡಿಯೂರಪ್ಪ ಸ್ಪಷ್ಟನೆ

ಮೈಸೂರು : ಬಂಡೀಪುರ ರಸ್ತೆ ಮಾರ್ಗದಲ್ಲಿರಾತ್ರಿ ಸಂಚಾರ ನಿಷೇಧ ಮುಂದುವರಿಯಲಿದೆ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ನ್ಯಾಯಾಲಯವು ಬಂಡೀಪುರ ರಸ್ತೆಯಲ್ಲಿರಾತ್ರಿ ಸಂಚಾರವನ್ನು ನಿಷೇಸಿ ಆದೇಶಿಸಿದೆ. ಕೇರಳದ ವಯನಾಡು ಕ್ಷೇತ್ರದ ಲೋಕಸಭಾ ಸದಸ್ಯ ರಾಹುಲ್‌ ಗಾಂ ಅವರಿಗೆ ಈ ವಿಚಾರ ತಿಳಿದಿರಬಹುದು'' ಎಂದು ಯಡಿಯೂರಪ್ಪ ಬುಧವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ''ರಾಜ್ಯದಲ್ಲಿಉಂಟಾದ ನೆರೆಯ ಪರಿಹಾರಕ್ಕೆ ಯಾರ ಪ್ರಭಾವವೂ ಬೇಕಾಗಿಲ್ಲ. ಯಾವ ಪಕ್ಷದವರೂ ಗೊಂದಲ ಉಂಟು ಮಾಡಿಕೊಳ್ಳುವ ಅಗತ್ಯವಿಲ್ಲ. ಕೇಂದ್ರ ಸರಕಾರ ಈವರೆಗೂ ದೇಶದ ಯಾವ ರಾಜ್ಯಕ್ಕೂ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈಗಷ್ಟೇ ಅಮೆರಿಕ ಪ್ರವಾಸ ಮುಗಿಸಿ ವಾಪಸಾಗಿದ್ದಾರೆ. ಇನ್ನೆರಡು ಮೂರು ದಿನಗಳಲ್ಲಿಪರಿಹಾರ ಘೋಷಣೆಯಾಗುವ ಭರವಸೆ ಇದೆ. ಯಾರೂ ದಿಲ್ಲಿಗೆ ಹೋಗಬೇಕಾಗಿಲ್ಲ. ಪ್ರಧಾನಿ ಮೋದಿ ಅವರಿಗೆ ಎಲ್ಲರಾಜ್ಯದ ಪರಿಸ್ಥಿತಿ ಗೊತ್ತಿದೆ'' ಎಂದು ಹೇಳಿದರು. ''ರಾಜ್ಯದ ಸಮ್ಮಿಶ್ರ ಸರಕಾರದ ಅವಯಲ್ಲಿಸುತ್ತೂರು ಶ್ರೀಗಳ ಫೋನ್‌ ಕದ್ದಾಲಿಕೆ ಮಾಡಿರುವ ಆರೋಪದ ಬಗ್ಗೆ ಪ್ರಶ್ನಿಸಿದಾಗ, ಯಾರ ಫೋನ್‌ ಕದ್ದಾಲಿಕೆ ಆಗಿದ್ದರೂ ಸತ್ಯ ಹೊರಬರಲಿದೆ. ಸಿಬಿಐ ತನಿಖೆಯ ಸಂಪೂರ್ಣ ವರದಿ ಬಂದ ನಂತರ ಆ ಬಗ್ಗೆ ಮಾತನಾಡುತ್ತೇನೆ'' ಎಂದರು. ಯಾವ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅವಕಾಶವಿಲ್ಲ: ಸಿ.ಸಿ.ಪಾಟೀಲ್‌ ಯಾವುದೇ ಕಾರಣಕ್ಕೂ ಬಂಡೀಪುರ ಹಾಗೂ ಕೇರಳ ನಡುವೆ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವುದಿಲ್ಲಎಂದು ಅರಣ್ಯ ಸಚಿವ ಸಿ.ಸಿ.ಪಾಟೀಲ್‌ ತಿಳಿಸಿದ್ದಾರೆ. ಬುಧವಾರ ಮೈಸೂರಿನಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಆವರು, ''ರಾಹುಲ್‌ಗಾಂ ಅವರು ಬಂಡೀಪುರ ಹಾಗೂ ಕೇರಳ ನಡುವೆ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ವಿಚಾರವನ್ನು ಒಬ್ಬ ಸಂಸದರಾಗಿ ಯೋಚನೆ ಮಾಡುತ್ತಿದ್ದಾರೆ. ಆ ಕಾರಣಕ್ಕಾಗಿಯೇ ಅವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಅವರು ಹಿಂದಿನ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಯೋಚನೆ ಮಾಡಿದರೆ, ಅವರಿಗೆ ಸಮಸ್ಯೆಯ ನೈಜ ಅರಿವಾಗುತ್ತದೆ,'' ಎಂದರು. ''ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವುದರಿಂದ ಪ್ರಾಣಿಗಳ ಬದುಕಿಗೆ ಧಕ್ಕೆಯಾಗುತ್ತದೆ. ಅಲ್ಲದೆ ಈಗಾಗಲೇ ರಾತ್ರಿ ವೇಳೆ ಸಂಚಾರದಿಂದ ಸಾಕಷ್ಟು ಪ್ರಾಣಿ ಪಕ್ಷಿಗಳು ಮೃತಪಟ್ಟಿವೆ. ಈ ಕಾರಣಕ್ಕೆ ಬಂಡೀಪುರ ಮಾರ್ಗವಾಗಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗವನ್ನು ಬಂದ್‌ ಮಾಡಲಾಗಿದೆ. ಇದನ್ನು ಸಡಿಲಿಕೆ ಮಾಡುವ ಪ್ರಶ್ನೆಯೇ ಇಲ್ಲಿಉದ್ಭವವಾಗುವುದಿಲ್ಲ. ನ್ಯಾಯಾಲಯವೂ ರಾತ್ರಿ ಸಂಚಾರಕ್ಕೆ ಅನುವು ನೀಡದಂತೆ ಆದೇಶ ನೀಡಿದೆ. ಹೀಗಾಗಿ ಈ ವಿಚಾರದಲ್ಲಿಯಾವುದೇ ಕಾರಣಕ್ಕೂ ಬದಲಿ ನಿರ್ಧಾರ ಕೈಗೊಳ್ಳುವುದಿಲ್ಲ,'' ಎಂದು ಸ್ಪಷ್ಟಪಡಿಸಿದರು. ಫೋನ್‌ ಕದ್ದಾಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ''ಯಾರೇ ಆದರೂ ನಿರ್ದಿಷ್ಟ ಉದ್ದೇಶವಿಲ್ಲದೆ ಅನ್ಯ ಕಾರಣಕ್ಕೆ ಫೋನ್‌ ಕದ್ದಾಲಿಕೆ ಮಾಡುವುದು ಅಕ್ಷಮ್ಯ ಅಪರಾಧ. ಈ ಪ್ರಕರಣದಲ್ಲಿಯಾರೇ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು,'' ಎಂದರು.


from India & World News in Kannada | VK Polls https://ift.tt/2nRrWfH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...