ವಿಜಯಪುರ: ನೆರೆ ಸಂತ್ರಸ್ತರ ಎಲ್ಲ ಮಾದರಿಯ ಸಾಲಮನ್ನಾ ಮಾಡಬೇಕು ಎಂದು ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯ ಮೃತ್ಯಂಜಯ ಶ್ರೀಗಳು ಆಗ್ರಹಿಸಿದರು. ಜಿಲ್ಲೆಯ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಸಂತ್ರಸ್ತರಿಗೆ ಯುಕೆಪಿ ಮಾದರಿಯಲ್ಲಿ ಮನೆ ನಿರ್ಮಾಣ ಮಾಡಿಕೊಡಬೇಕು. ಪ್ರವಾಹದಿಂದ ಹಾನಿಯಾಗಿರುವ ಪ್ರತಿ ಎಕರೆಗೆ 50-60 ಸಾವಿರ ರೂಪಾಯಿ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಯೂರಪ್ಪ ಅವರನ್ನು ಒತ್ತಾಯಿಸಿರುವುದಾಗಿ ತಿಳಿಸಿದರು. ನೆರೆಯಿಂದ ಕೂಡಲಸಂಗಮ ಐಕ್ಯಮಂಟಪಕ್ಕೆ ಹಾನಿಯಾಗಿದ್ದು, ಕಳೆದ 6 ತಿಂಗಳಿಂದ ಭಕ್ತರಿಗೆ ಐಕ್ಯಮಂಟಪ ದರ್ಶನ ಸಿಕುತ್ತಿಲ್ಲ. ಕೂಡಲಸಂಗಮ ಪ್ರಾಧಿಕಾರದ ಅಧ್ಯಕ್ಷರು ಆಗಿರುರುವ ಮುಖ್ಯಮಂತ್ರಿ ಅವರು, ತಕ್ಷಣ ಐಕ್ಯಮಂಟಪ ದುರಸ್ಥಿ ಕಾರ್ಯ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಪ್ರವಾಹ ಸಂತ್ರಸ್ತರ ಪರವಾಗಿ ಧ್ವನಿ ಎತ್ತಿರುವ ವಿಜಯಪುರ ನಗರ ಶಾಸರ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಶ್ರೀಗಳು ಆಗ್ರಹಿಸಿದರು. ಶಾಸಕರು ನೆರೆ ಸಂತ್ರಸ್ತರ ಪರ ಮಾತನಾಡಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಹೀಗಾಗಿ ಅವರಿಗೆ ನೀಡಿರುವ ನೋಟೀಸ್ ವಾಪಸ್ ಪಡೆದುಕೊಳ್ಳಬೇಕು ಎಂದು ಸಿಎಂ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದರು.
from India & World News in Kannada | VK Polls https://ift.tt/2OjSukf