ಚಿಕ್ಕಮಗಳೂರು: ನೆರೆಯಿಂದ ಆಸ್ತಿ-ಪಾಸ್ತಿ ಕಳೆದುಕೊಂಡಿದ್ದು, ಸರಕಾರದಿಂದ ಯಾವುದೇ ಪರಿಹಾರ ಸಿಗಲಿಲ್ಲ ಎಂದು ಮನನೊಂದು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮೂಡಿಗೆರಿ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ನಡೆದಿದೆ. ಚಂದ್ರೇಗೌಡ (55) ಆತ್ಮಹತ್ಯೆಗೆ ಶರಣಾದ ರೈತ. ಚಂದೇಗೌಡ ಅವರ ಅರ್ಧ ಎಕರೆ ಭತ್ತದ ಗದ್ದೆ ಮತ್ತು ಅರ್ಧ ಎಕರೆ ಕಾಫಿ ತೋಟ ನೆರೆಯಿಂದ ಹಾಳಾಗಿತ್ತು. ತೋಟ ಸರಿಪಡಿಸಲು ಕೈ ಸಾಲ ಮಾಡಿಕೊಂಡಿದ್ದರು. ಆದರೆ, ನೆರೆಗೆ ಸರಕಾರ ಯಾವುದೇ ಪರಿಹಾರ ನೀಡುತ್ತಿಲ್ಲ ಎಂದು ಮನನೊಂದು ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಒಂದೇ ಹೋಬಳಿಯ ಇಬ್ಬರು ರೈತರು ಸಾವಿಗೆ ಶರಣಾಗಿದ್ದಾರೆ. ಕಳೆದ ತಿಂಗಳು ಕಳಸ ಸಮೀಪದ ಕಾರ್ಗದ್ದೆಯ ಚೆನ್ನಪ್ಪಗೌಡ (65) ಎಂಬವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
from India & World News in Kannada | VK Polls https://ift.tt/2oCi0qm