ಹೊಸದಿಲ್ಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ () ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ನಾಯಕ ಅವರಿಗೆ ಟೀಮ್ ಇಂಡಿಯಾ ಕೋಚ್ ಶುಭ ಹಾರೈಸಿದ್ದಾರೆ. ಈ ಮೊದಲು ಬಿಸಿಸಿಐ ಅಧ್ಯಕ್ಷರಾದ ಬಳಿಕ ಅಕ್ಟೋಬರ್ 24ರಂದು ಬಾಂಗ್ಲಾದೇಶ ವಿರುದ್ಧದ ಸರಣಿಗೆ ತಂಡದ ಆಯ್ಕೆ ಪ್ರಕ್ರಿಯೆ ವೇಳೆಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾರನ್ನು ಭೇಟಿಯಾಗಿರುವ ಸೌರವ್ ಗಂಗೂಲಿ, ಭಾರತೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದ್ದರು. ಆದರೆ ಇಲ್ಲಿ ಪ್ರಮುಖವಾಗಿಯೂ ಕೋಚ್ ರವಿ ಶಾಸ್ತ್ರಿ ಅನುಪಸ್ಥಿತಿ ಎದ್ದು ಕಾಣಿಸುತ್ತಿತ್ತು. ಇದೀಗ ವಿಜಯ ಕರ್ನಾಟಕ ಸೋದರ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ರವಿ ಶಾಸ್ತ್ರಿ ಮೊದಲ ಬಾರಿಗೆ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಸೌರವ್ ಗಂಗೂಲಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಗಂಗೂಲಿ ನೇಮಕವು ಭಾರತೀಯ ಕ್ರಿಕೆಟ್ ಸರಿಯಾದ ದಿಕ್ಕಿನತ್ತ ಸಾಗುತ್ತಿದೆ ಎಂಬುದಕ್ಕೆ ಸೂಚನೆಯಾಗಿದೆ" ಎಂದು ನುಡಿದರು. "ಸೌರವ್ ಗಂಗೂಲಿ ನೈಸರ್ಗಿಕ ನಾಯಕರಾಗಿದ್ದು, ನಾಲ್ಕೈದು ವರ್ಷಗಳ ಹಿಂದೆಯೇ ಕ್ರಿಕೆಟ್ ಆಡಳಿತಕ್ಕೆ ಕಾಲಿಟ್ಟಿದ್ದಾರೆ. ಇದೀಗ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸುವ ಮೂಲಕ ಭಾರತೀಯ ಕ್ರಿಕೆಟ್ ಪಾಲಿಗೆ ವಿನ್-ವಿನ್ ಪರಿಸ್ಥಿತಿ ನಿರ್ಮಾಣವಾಗಿದೆ" ಎಂದರು. "ಮಂಡಳಿಯೀಗ ಕಷ್ಟಕರ ಪರಿಸ್ಥಿತಿಯಲ್ಲಿದ್ದು, ಹಳೆಯ ಕಾಲದ ವೈಭವಕ್ಕೆ ಮರಳಲು ಸಾಕಷ್ಟು ಪರಿಶ್ರಮದ ಅಗತ್ಯವಿದೆ. ಗಂಗೂಲಿ ಆಡಳಿತಾವಧಿಯಲ್ಲಿ ಯಶಸ್ಸು ಸಿಗಲು ಶುಭ ಹಾರೈಸುತ್ತೇನೆ" ಎಂದು ಸೇರಿಸಿದರು. ಅಂದ ಹಾಗೆ ಬಾಂಗ್ಲಾದೇಶ ವಿರುದ್ಧ ಕೋಲ್ಕೊತಾದ ಈಡೆನ್ ಗಾರ್ಡೆನ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆ ಕೋಚ್ ರವಿಶಾಸ್ತ್ರಿ ಜತೆ ಸೌರವ್ ಗಂಗೂಲಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಮೂರು ವರ್ಷಗಳ ಹಿಂದೆಯೇ ರವಿ ಶಾಸ್ತ್ರಿ ಹಾಗೂ ಸೌರವ್ ಗಂಗೂಲಿ ನಡುವೆ ಶೀತಲ ಸಮರ ಏರ್ಪಟ್ಟಿತ್ತು. ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷರಾಗಿದ್ದ ಸೌರವ್ ಗಂಗೂಲಿ, ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿಯನ್ನು ಕಡೆಗಣಿಸಿ ಅನಿಲ್ ಕುಂಬ್ಳೆರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲು ಮುಖ್ಯ ಪಾತ್ರ ವಹಿಸಿದ್ದರು. ಇದರ ವಿರುದ್ಧ ರವಿಶಾಸ್ತ್ರಿ ಬಹಿರಂಗವಾಗಿಯೇ ಆರೋಪ ಮಾಡಿದ್ದರು. 2017ರಲ್ಲಿ ವಿರಾಟ್ ಕೊಹ್ಲಿ ಜತೆಗಿನ ಭಿನ್ನಭಿಪ್ರಾಯದ ಹಿನ್ನಲೆಯಲ್ಲಿ ಕುಂಬ್ಳೆ ಕೋಚ್ ಸ್ಥಾನವನ್ನು ತೊರೆದಿದ್ದರು. ಬಳಿಕ ಕೊಹ್ಲಿ ಆಸಕ್ತಿಯೊಂದಿಗೆ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ ಆಯ್ಕೆಯಾಗಿದ್ದರು. ತದಾ ಬಳಿಕ ಎರಡನೇ ಬಾರಿಗೆ ರವಿಶಾಸ್ತ್ರಿ ಕೋಚ್ ಹುದ್ದೆಗೆ ಪುನರಾಯ್ಕೆಯಾಗಿದ್ದಾರೆ. ಈ ಮಧ್ಯೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿರುವುದು ನೇಮಕವಾಗಿರುವುದು ಹೆಚ್ಚಿನ ಕುತೂಹಲವ ಮೂಡಿಸಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/341zyeO