ಬೆಂಗಳೂರು: ಬೆಂಗಳೂರು: ಕೇಂದ್ರದಿಂದ ಕೊಡಿಸಲು ಸರಕಾರ ವಿಫಲವಾಗಿದೆ. ಪರಿಹಾರ ಕುರಿತ ರಾಜ್ಯ ನಿಯೋಗದ ವರದಿಯನ್ನು ಕೇಂದ್ರದ ನಿಯೋಗ ತಿರಸ್ಕರಿಸಿದೆ ಎಂಬ ಸುದ್ದಿ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಸನ್ಮಾನ್ಯ ಬಿಎಸ್ ಯಡಿಯೂರಪ್ಪ ಅವರೇ ನಿಮ್ಮ ಜಗಳದಲ್ಲಿ ಕರ್ನಾಟಕವನ್ನು ಯಾಕೆ ಬಲಿಕೊಡುತ್ತೀರಿ? ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಸರಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ." ಎಂದು ಬರೆದುಕೊಂಡಿದ್ದಾರೆ. ನೆರೆ ಪರಿಹಾರ ಕೊಡಲು ರಾಜ್ಯದ ಬಳಿ ಹಣವಿಲ್ಲ. ಬೊಕ್ಕಸ ಖಾಲಿಯಾಗಿದೆ ಎಂದು ಯಡಿಯೂರಪ್ಪ ಬೆಳಗಾವಿ ಜಿಲ್ಲಾ ಪಂತಾಯತ್ ಸಭಾಂಗಣದಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಮತ್ತೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರೇ ನಿಮ್ಮ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಕೂಡಾ ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ" ಎಂದಿದ್ದಾರೆ.
from India & World News in Kannada | VK Polls https://ift.tt/331nMRa