ಅತ್ಮಾಹುತಿ ಬಾಂಬರ್‌ಗಳು ನುಸುಳಿರುವ ಶಂಕೆ: ದಿಲ್ಲಿಯಲ್ಲಿ ರೆಡ್ ಅಲರ್ಟ್, ಇಬ್ಬರ ಬಂಧನ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 4-5 ಆತ್ಮಾಹುತಿ ಬಾಂಬರ್‌ಗಳು ನುಗ್ಗಿದ್ದಾರೆಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯಿಂದಲೇ ದಿಲ್ಲಿ ಸೇರಿದಂತೆ 9 ಪ್ರದೇಶಗಳಲ್ಲಿ ಘೋಷಿಸಲಾಗಿದೆ. 'ಎ' ವರ್ಗದ ಗುಪ್ತಚರ ಮಾಹಿತಿ ಲಭ್ಯವಾದ ಬಳಿಕ ದಿಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ನಗರದೆಲ್ಲೆಡೆ ಹದ್ದಿನ ಕಣ್ಣು ಇರಿಸಿದ್ದಾರೆ. 'ಎ' ವರ್ಗದ ಗುಪ್ತಚರ ಮಾಹಿತಿ ಅತ್ಯಂತ ವಿಶ್ವಾಸಾರ್ಹವೆಂದು ಪರಿಗಣಿಸಲಾಗುತ್ತದೆ. ಈಗಾಗಲೇ ದಿಲ್ಲಿ ಪೊಲೀಸರು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಧ್ವಂಸಕ ಕೃತ್ಯ ಎಸಗಲು ದಿಲ್ಲಿಗೆ ಪ್ರವೇಶಿಸಿರುವ ಭಯೋತ್ಪಾದಕರು ಪಾಕಿಸ್ತಾನ ಮೂಲದ ಸಂಘಟನೆ ಜತೆ ಸಂಬಂಧ ಹೊಂದಿದ್ದಾರೆಂದು ಮೂಲಗಳು ತಿಳಿಸುತ್ತಿವೆ. ಕಣಿವೆ ನಾಡು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದತಿಯಿಂದ ಹತಾಶರಾಗಿರುವ ಉಗ್ರರು, ರಾಷ್ಟ್ರ ರಾಜಧಾನಿಯಲ್ಲಿ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಳ್ಳುವ ಸಂಚು ರೂಪಿಸಿದ್ದಾರೆ. ದಿಲ್ಲಿಗೆ ನುಗ್ಗಿರುವ 4-5 ಆತ್ಮಾಹುತಿ ಬಾಂಬರ್‌ಗಳ ಪೈಕಿ ಇಬ್ಬರು ವಿದೇಶಿಯರು ಎಂದು ಹೇಳಲಾಗುತ್ತಿದೆ. ಗುಪ್ತಚರ ಮಾಹಿತಿ ಅನುಸರಿಸಿ ದಿಲ್ಲಿ ಪೊಲೀಸರ ವಿಶೇಷ ತಂಡ ಬುಧವಾರ ರಾತ್ರಿ ನಗರದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಗುರಿಯಾಗಿಸಿಕೊಂಡ ದಾಳಿ ನಡೆಸಲು ಪಾಕಿಸ್ತಾನ ಮೂಲದ ಜೈಷೆ ಮಹಮ್ಮದ್ ಉಗ್ರ ಸಂಘಟನೆ ವಿಶೇಷ ತಂಡ ಸಿದ್ಧಪಡಿಸುತ್ತಿದೆ ಎಂದು ಗುಪ್ತಚರ ಇಲಾಖೆ ಸ್ಪೋಟಕ ಮಾಹಿತಿ ನೀಡಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದತಿಗೆ ಪ್ರತೀಕಾರವಾಗಿ ಜೈಷೆ ಮಹಮ್ಮದ್ ಸಂಘಟನೆ ಭಾರೀ ಸಂಚು ರೂಪಿಸುತ್ತಿದೆ ಎಂದು ಭಾರತೀಯ ಗುಪ್ತಚರ ಇಲಾಖೆ ಮೂಲಗಳು ತಿಳಿಸಿದ್ದವು.


from India & World News in Kannada | VK Polls https://ift.tt/2pxEF7v

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...