ಮ.ಪ್ರ: ಗಾಂಧಿ ಚಿತಾಭಸ್ಮ ಕದ್ದು, ಫೋಟೋ ಮೇಲೆ 'ದೇಶದ್ರೋಹಿ' ಎಂದು ಬರೆದ ದುಷ್ಕರ್ಮಿಗಳು!

ರೀವಾ (): ಅಕ್ಟೋಬರ್ 2ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆದರೆ, ಮಧ್ಯಪ್ರದೇಶದ ರೇವಾದಲ್ಲಿ ಗಾಂಧಿ ಚಿತಾಭಸ್ಮ ಕದ್ದ ದುಷ್ಕರ್ಮಿಗಳು, ಅವರ ಭಾವಚಿತ್ರದ ಮೇಲೆ 'ದೇಶದ್ರೋಹಿ' ಎಂದು ಬರೆಯುವ ಮೂಲಕ ವಿಕೃತಿ ಪ್ರದರ್ಶಿಸಿದ್ದಾರೆ. ಈ ಘಟನೆ ರೀವಾ ನಗರದ ಬಾಪೂ ಭವನದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನೆ ಖಂಡಿಸಿ ರೀವಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗುರ್ಮೀತ್ ಸಿಂಗ್ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನಾ ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುತ್ತೇವೆಂದು ರೀವಾ ಪೊಲೀಸ್ ಆಯುಕ್ತ ಅಬಿದ್ ಖಾನ್ ತಿಳಿಸಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು 1948 ರಿಂದ ಮಧ್ಯಪ್ರದೇಶದ ಭಾರತ್ ಭವನದಲ್ಲಿ ಇರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಈ ಘಟನೆ ಹಿಂದೆ ಬಿಜೆಪಿ ಮತ್ತು ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪರ ಪ್ರಚಾರಕರ ಕೈವಾಡ ಇದೆ ಎಂದು ಕಾಂಗ್ರಸ್ ಕಾರ್ಯಕರ್ತರು ಆರೋಪಿಸಿದ್ದಾರೆ.


from India & World News in Kannada | VK Polls https://ift.tt/330NvZV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...