ಹೊಸದಿಲ್ಲಿ: ವೆಸ್ಟ್ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಟ್ವೆಂಟಿ-20 ಹಾಗೂ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಅಚ್ಚರಿಯೆಂಬಂತೆ ಕೇರಳದ ಯುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ರನ್ನು ಕೈಬಿಡಲಾಗಿದೆ. ಕಳೆದ ಬಾಂಗ್ಲಾದೇಶ ವಿರುದ್ಧ ಸಾಗಿದ ಟ್ವೆಂಟಿ-20 ಸರಣಿಯಲ್ಲಿ ವೇಳೆಗೆ ಸಂಜುರನ್ನು ಆಯ್ಕೆ ಮಾಡಲಾಗಿತ್ತು. ಈ ಮೂಲಕ ನಾಲ್ಕು ವರ್ಷಗಳ ಬಳಿಕ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡಲಾದ ಸರಣಿಯಲ್ಲಿ ಭಾರತ 2-1 ಅಂತರದ ಗೆಲುವು ದಾಖಲಿಸಿತ್ತು. ಆದರೆ ಒಂದೇ ಒಂದು ಅವಕಾಶ ಸಿಗದೇ ಸಂಜು ನಿರಾಸೆ ಅನುಭವಿಸಿದ್ದರು. ಇದೀಗ ಏಕಾಏಕಿ ತಂಡದಿಂದ ಹೊರಗಟ್ಟಲಾಗಿದೆ. ಇದು ಅಭಿಮಾನಿಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿ ನೀಡಿರುವ ಪ್ರತಿಕ್ರಿಯೆ ಹೆಚ್ಚು ಗಮನ ಸೆಳೆಯುತ್ತಿದೆ. ಟೀಮ್ ಇಂಡಿಯಾದಿಂದ ಅವಕಾಶ ವಂಚಿತರಾದರೂ ಸಂಜು ಸ್ಯಾಮನ್ ಮುಗುಳುನಗೆ ಮೂಲಕ ಉತ್ತರಿಸಿದ್ದಾರೆ. ಇದಕ್ಕೀಗ ವ್ಯಾಪಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ರಿಷಬ್ ಪಂತ್ಗೆ ಅನೇಕ ಅವಕಾಶಗಳು ನೀಡಿದರೂ ತಮ್ಮ ಸಾಮರ್ಥ್ಯವನ್ನು ಮೆರೆಯುವಲ್ಲಿ ವಿಫಲವಾಗಿದ್ದಾರೆ. ಇಷ್ಟಾದರೂ ಸಂಜುಗೆ ಏಕೆ ಒಂದೇ ಒಂದು ಅವಕಾಶ ನೀಡುತ್ತಿಲ್ಲವೆಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಧೋನಿ ಕಮ್ಬ್ಯಾಕ್ ಯಾವಾಗ? ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ಬ್ಯಾಟ್ಸ್ಮನ್ ಕಮ್ಬ್ಯಾಕ್ ಮಾಡಲಿದ್ದಾರೆಯೇ ಎಂಬುದು ಗೊಂದಲಕ್ಕೀಡಾಗಿದೆ. ಈಗಷ್ಟೇ ಅಭ್ಯಾಸ ಆರಂಭಿಸಿದರೂ ವಿಂಡೀಸ್ ಸರಣಿಗೆ ಧೋನಿ ಆಯ್ಕೆಯನ್ನು ಪರಿಗಣಿಸಿಲ್ಲ. ಈ ಮೂಲಕ ಧೋನಿ ಕಡೆಗಣಿಸಿರುವುದನ್ನು ಅಭಿಮಾನಿಗಳು ಪ್ರಶ್ನಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/37rRZvM