ಕೋಲ್ಕೊತಾ: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಐತಿಹಾಸಿಕ ಹೊನಲು ಬೆಳಕಿನ ಟೆಸ್ಟ್ ಪಂದ್ಯವು ಕೋಲ್ಕೊತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆರಂಭವಾಗಿದೆ. ಇದರಂತೆ ಟಾಸ್ ಗೆದ್ದಿರುವ ಬಾಂಗ್ಲಾದೇಶ ನಾಯಕ ಮೊಮಿನುಲ್ ಹಕ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಬಾಂಗ್ಲಾದ ಆರಂಭ ನಿರೀಕ್ಷಿಸಿದಷ್ಟು ಉತ್ತಮವಾಗಿರಲಿಲ್ಲ. 15 ರನ್ ಗಳಿಸುವಷ್ಟರಲ್ಲಿ ಆರಂಭಿಕ ಇಮ್ರುಲ್ ಕೇಯ್ಸ್ ವಿಕೆಟ್ ನಷ್ಟವಾಯಿತು. ಕೇವಲ 4 ರನ್ ಗಳಿಸಿದ ಇಮ್ರುಲ್ ಕೇಯ್ಸ್ರನ್ನು ಬಲಗೈ ವೇಗಿ ಎಲ್ಬಿಡಬ್ಲ್ಯು ಬಲೆಗೆ ಸಿಲುಕಿಸಿದರು. ಇದರೊಂದಿಗೆ ಗುಲಾಬಿ ಚೆಂಡಿನಲ್ಲಿ ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎಂಬ ಹಿರಿಮೆಗೆ ಇಶಾಂತ್ ಶರ್ಮಾ ಭಾಜನವಾದರು. ಇಂದೋರ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 150 ರನ್ಗಳ ಬೃಹತ್ ಅಂತರದ ಗೆಲುವು ದಾಖಲಿಸಿತ್ತು. ಭಾರತದ ಗೆಲುವಿನಲ್ಲಿ ತ್ರಿವಳಿ ವೇಗಿಗಳಾದ ಇಶಾಂತ್ ಶರ್ಮಾ, ಇಶಾಂತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ಮಹತ್ತರ ಪಾತ್ರ ವಹಿಸಿದ್ದರು. ಇದೀಗ ಕೋಲ್ಕೊತಾ ಟೆಸ್ಟ್ ಪಂದ್ಯದಲ್ಲೂ ಭಾರತೀಯ ವೇಗಿಗಳು ಮಾರಕ ದಾಳಿ ಸಂಘಟಿಸುವ ಮೂಲಕ ಗಮನ ಸೆಳೆದಿದ್ದಾರೆ. ಇಶಾಂತ್ ಶರ್ಮಾ ಮೊದಲ ವಿಕೆಟ್ ಪಡೆಯುವ ಮೂಲಕ ಬಾಂಗ್ಲಾ ಕುಸಿತಕ್ಕೆ ಕಾರಣವಾದರು. ಇದರೊಂದಿಗೆ 96ನೇ ಟೆಸ್ಟ್ ಪಂದ್ಯದಲ್ಲಿ 284ನೇ ವಿಕೆಟ್ ಪಡೆದರು. ಇದರೊಂದಿಗೆ 284ನೇ ವಿಕೆಟ್ ಸಾಧನೆಯನ್ನು ಸ್ಮರಣೀಯವಾಗಿಸಿದರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2KEOE2H