ಬೆಂಗಳೂರು: ನಾನು ಮುಖ್ಯಮಂತ್ರಿ ಆಗಿದ್ದಾಗ ಕೈಗೆ ಸಿಗುತ್ತಿರಲಿಲ್ಲ. ತಾಜ್ ಹೋಟೆಲ್ನಲ್ಲೇ ಕಾಲ ಕಳೆಯುತ್ತಿದ್ದರು, ಅಭಿವೃದ್ಧಿಗೆ ಅನುದಾನ ಕೊಟ್ಟಿಲ್ಲ ಎಂದು ಹಲವರು ಆರೋಪಿಸಿದ್ದಾರೆ. ಆದರೆ ಯಾರು ಯಾರಿಗೆ ಎಷ್ಟು ಅನುದಾನ ಕೊಟ್ಟಿದ್ದೇನೆ ಎಂಬ ಸಂಪೂರ್ಣ ದಾಖಲೆ ನನ್ನ ಬಳಿ ಇದೆ ಎಂದು ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಕುಮಾರಸ್ವಾಮಿ, ಅನರ್ಹ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಭಿವೃದ್ಧಿಗೆ ಕುಮಾರಸ್ವಾಮಿ ಹಣ ಕೊಡ್ಲಿಲ್ಲ ಎಂದು ಹೇಳ್ತಾರೆ. ಯಾವ ಶಾಸಕರಿಗೆ ಎಷ್ಟು ಅನುದಾನ ನೀಡಿದ್ದೇನೆ ಅನ್ನೊ ದಾಖಲೆ ಇದೆ. ಆ ದಾಖಲೆಯನ್ನ ಜನರ ಮುಂದೆ ಇಡುತ್ತೇನೆ ಎಂದರು. ನಗರೋತ್ಥನ ಯೋಜನೆಯಲ್ಲಿ ಎಷ್ಟೆಷ್ಟು ಅನುದಾನ ಕೊಟ್ಟಿದ್ದೇನೆ ಅನ್ನೊದು ಗೊತ್ತಿದೆ. ನಾವು ಕೊಟ್ಟಿರೋದಕ್ಕೆ ಯಡಿಯೂರಪ್ಪನವರು ಆದೇಶ ಮಾಡಿದ್ದಾರೆ ಎಂದು ಎಚ್ಡಿಕೆ ತಿಳಿಸಿದರು. ಅನರ್ಹ ಶಾಸಕರು ಅಪಪ್ರಚಾರ ಮಾಡ್ತಿದ್ದಾರೆ. ಅವರ ತೀಟೆಗಳಿಗೆ, ಅವರು ಹಣ ಮಾಡೋಕೆ ನಾನು ಸಹಕಾರ ಕೊಡ್ಲಿಲ್ಲ ಅಂತಾ ಬೆನ್ನಿಗೆ ಚೂರಿ ಹಾಕಿದ್ದಾರೆ. ಬಿಜೆಪಿ ಶಾಸಕರೇ ಕುಮಾರಸ್ವಾಮಿ ಸಿಎಂ ಆಗಿದ್ರೆ ಚೆನ್ನಾಗಿರ್ತಿತ್ತು ಅಂತಾ ಹೇಳ್ತಾರೆ. ಬೇಕಾದ್ರೆ ಆಫ್ ದಿ ರೆಕಾರ್ಡ್ ಹೋಗಿ ಕೇಳ್ಕೊಳ್ಳಿ ಎಂದರು. ಯಶವಂತಪುರ ಕ್ಷೇತ್ರಕ್ಕೆ 419 ಕೋಟಿ ರೂ ಅನುದಾನ ಕೊಟ್ಟಿದ್ದೇನೆ. ಅವರ ಅಭಿವೃದ್ಧಿಗೆ ಅನುದಾನ ಕೊಟ್ಟಿಲ್ಲ, ಅವರ ಕಾನೂನು ಬಾಹಿರ ಚಟುವಟಿಕೆಗಳಿಗೆ ಬೆಂಬಲ ಕೊಟ್ಟಿಲ್ಲ ಅಷ್ಟೇ ಎಂದು ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿ ಎಸ್ಟಿ ಸೋಮಶೇಖರ್ ವಿರುದ್ಧ ಕಿಡಿಕಾರಿದರು.
from India & World News in Kannada | VK Polls https://ift.tt/2Db4IoI