ಬಿಎಸ್‌ ಯಡಿಯೂರಪ್ಪ ಆಜನ್ಮ ಶತ್ರುವಲ್ಲ: ಎಚ್‌ಡಿ ದೇವೇಗೌಡ

ಬೆಂಗಳೂರು: 'ಯಡಿಯೂರಪ್ಪನವರು ಈ ರಾಜ್ಯದ ಮುಖ್ಯಮಂತ್ರಿ, ಮಾತನಾಡದೇ ಇರುವುದಕ್ಕೆ ನಾವಿಬ್ಬರು ಆಜನ್ಮ ಶತ್ರುಗಳಲ್ಲ' ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ. ಜೆಡಿಎಸ್‌ ಕಾರ್ಯಕರ್ತನ ಮೇಲೆ ದೌರ್ಜನ್ಯ ಎಸಗಿದ ಯಾದಗಿರಿ ಗ್ರಾಮಾಂತರ ಠಾಣಾ ಸಬ್‌ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಸಿಎಂ ನಿವಾಸದ ಎದುರು ಧರಣಿ ನಡೆಸುವುದಾಗಿ ದೇವೇಗೌಡರು ನೀಡಿದ ಎಚ್ಚರಿಕೆ ಬೆನ್ನಲ್ಲೇ ಸರಕಾರ ಸಬ್‌ ಇನ್‌ಸ್ಪೆಕ್ಟರ್‌ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪಗೆ ದೇವೇಗೌಡರು ಕೃತಜ್ಞತೆ ಸಲ್ಲಿಸಿದ್ದಾರೆ. ಈ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 'ಸಮಯ ಬಂದರೆ ಯಡಿಯೂರಪ್ಪ ಜತೆಗೆ ನೇರವಾಗಿ ಮಾತನಾಡುತ್ತೇನೆ. ಪುಸ್ತಕ ಪ್ರದರ್ಶನಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಲಹೆಗಾರ ಲಕ್ಷ್ಮಿನಾರಾಯಣಗೆ ಕರೆ ಮಾಡಿದ್ದೆ . ಆ ಸಂದರ್ಭದಲ್ಲಿ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದೆ. ಆದರೆ ಇದು ರಾಜಕಾರಣಕ್ಕೆ ಸಂಬಂಧಿಸಿದ ವಿಚಾರವಾಗಿರಲಿಲ್ಲ' ಎಂದು ಹೇಳುವ ಮೂಲಕ ಹಿಂದಿನ ದ್ವೇಷ ನಮ್ಮಲ್ಲಿಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. 'ರಾಜಕಾರಣದಲ್ಲಿಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಯಾವ ಸಂದರ್ಭದಲ್ಲಿ ಏನಾಗುತ್ತದೋ ಗೊತ್ತಿಲ್ಲ. ಈ ಹಿಂದೆ ನಾನು ಸಿದ್ದರಾಮಯ್ಯ ಪರಸ್ಪರ ಹೋರಾಟ ನಡೆಸಿದ್ದೆವು. ನಂತರ ಒಂದೇ ವೇದಿಕೆಯಲ್ಲಿ ಭಾಷಣ ಮಾಡಿಲ್ಲವೇ? ಯಾರಿಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಎತ್ತರಕ್ಕೆ ಬೆಳೆಯುವುದಕ್ಕೆ ಸಾಧ್ಯವಿಲ್ಲ' ಎಂದು ಅಭಿಪ್ರಾಯಪಟ್ಟರು. ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ,'ಕಾಲ್ಪನಿಕ ಪ್ರಶ್ನೆಗಳಿಗೆ ನಾನು ಉತ್ತರ ಕೊಡುವುದಿಲ್ಲ' ಎಂದು ಹೇಳಿದರು. 'ಸಾರ್ವತ್ರಿಕ ಚುನಾವಣೆ ಯಾವಾಗ ಎದುರಾಗುತ್ತದೆ ಎಂಬುದು ಗೊತ್ತಿಲ್ಲ. ನಾನು ಯಾರ ಜತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಈಗಲೇ ಹೇಳಲು ಸಾಧ್ಯವೇ ? ಹೀಗಿರುವಾಗ ಯಡಿಯೂರಪ್ಪ ಪರ, ಸಿದ್ದರಾಮಯ್ಯ ವಿರುದ್ಧ ಈಗಲೇ ಮಾತನಾಡುವುದು ಸರಿಯಲ್ಲ. ಮಹಾರಾಷ್ಟ್ರದಲ್ಲಿ ಈಗ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು' ಎಂದರು.


from India & World News in Kannada | VK Polls https://ift.tt/33lvc2a

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...