ಮುಂಬಯಿ: ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ನೇತೃತ್ವದಲ್ಲಿ ಬಿಜೆಪಿ - ಎನ್ಸಿಪಿ ಸರಕಾರ ರಚನೆಯಾಗಿದೆ. ಆದರೆ, ಶಿವಸೇನೆ - ಕಾಂಗ್ರೆಸ್ ಜತೆ ಸೇರಿ ಸರಕಾರ ರಚನೆಗೆ ಮುಂದಾಗಿದ್ದ ಶರದ್ ಪವಾರ್ ಇದಕ್ಕೆ ಒಪ್ಪಿಗೆ ನೀಡಿದ್ದಾರಾ ಎಂಬ ಅನುಮಾನ ಹಲವರಿಗೆ ಮೂಡುತ್ತಿದೆ. ಶಿವಸೇನೆಗೆ ಶಾಕ್ ನೀಡಿ ಶನಿವಾರ ಬೆಳ್ಳಂಬೆಳಗ್ಗೆ ಬಿಜೆಪಿ ನೇತೃತ್ವದ ಸರಕಾರ ರಚನೆಯಾಗಿದೆ. ಆದರೆ ಶಿವಸೇನೆ ನೇತೃತ್ವದ ಸರಕಾರ ರಚನೆಗೆ ಕಾಂಗ್ರೆಸ್ ಹಾಗೂ ಎನ್ಸಿಪಿ ಎರಡೂ ಪಕ್ಷಗಳು ಒಪ್ಪಿಗೆ ಸೂಚಿಸಿವೆ ಎನ್ನಲಾಗಿತ್ತು. ಇನ್ನೇನು ಶಿವಸೇನೆ ನೇತೃತ್ವದ ಸರಕಾರ ರಚನೆಯಾಗಲಿದ್ದು, ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಇದಕ್ಕೆ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ ಎಂದೂ ತಿಳಿದುಬಂದಿತ್ತು. ಈ ಹಿನ್ನೆಲೆ ಬಿಜೆಪಿ - ಎನ್ಸಿಪಿ ಸರಕಾರ ರಚನೆಗೆ ಶರದ್ ಪವಾರ್ ಒಪ್ಪಿಗೆ ನೀಡಿದ್ದಾರಾ ಎಂಬ ಮಾತುಗಳು ಮಹಾರಾಷ್ಟ್ರದಲ್ಲಿ ಕೇಳಿ ಬರುತ್ತಿದೆ. ಆದರೆ, ದೇವೇಂದ್ರ ಫಡ್ನವಿಸ್ ನೇತೃತ್ವದ ಸರಕಾರ ರಚನೆಗೆ ಎನ್ಸಿಪಿ ಅಧ್ಯಕ್ಷ ಒಪ್ಪಿಗೆ ಇದೆ ಎಂದು ಮೂಲಗಳು ಮಾಹಿತಿ ನೀಡಿರುವ ಬಗ್ಗೆ ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ. ಈ ಸುದ್ದಿ ಓದಿ: ಅಲ್ಲದೆ, ಅಜಿತ್ ಪವಾರ್ ಎನ್ಸಿಪಿ ಶಾಸಕಾಂಗ ನಾಯಕರಾಗಿದ್ದು, ಶರದ್ ಪವಾರ್ ಒಪ್ಪಿಗೆ ಇಲ್ಲದೆ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದೂ ಮೂಲಗಳು ತಿಳಿಸಿರುವ ಬಗ್ಗೆ ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ. ಇನ್ನೊಂದೆಡೆ, ಶರದ್ ಪವಾರ್ ಈ ಸರಕಾರಕ್ಕೆ ಒಪ್ಪಿಗೆ ನೀಡಿಲ್ಲ ಎಂದು ಸ್ವತ: ಎನ್ಸಿಪಿ ಅಧ್ಯಕ್ಷ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ನೇತೃತ್ವದ ಸರಕಾರ ರಚನೆಗೆ ತಮ್ಮ ಬೆಂಬಲವಿಲ್ಲ ಎಂಬುದನ್ನು ತಿಳಿಸಿದ್ದಾರೆ. ಅಲ್ಲದೆ, ಎನ್ಸಿಪಿಯ 54 ಶಾಸಕರ ಪೈಕಿ 22 ಮಂದಿ ಬಿಜೆಪಿ ಸರಕಾರದ ಜತೆಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಮಹಾರಾಷ್ಟ್ರ ರಾಜಕೀಯ ಮತ್ತೊಂದು ಮಹಾ ಅಚ್ಚರಿಗೆ ಕಾರಣವಾಗಿರುವುದಂತೂ ಸತ್ಯ.
from India & World News in Kannada | VK Polls https://ift.tt/34dwInj