ಬೆಂಗಳೂರು: ಉಪ ಚುನಾವಣೆಗೆ ಪ್ರಚಾರ ಜೋರಾಗಿದೆ. ಸಾಗಿದೆ. ಈ ಸಂದರ್ಭದಲ್ಲಿ ಬ್ಯುಸಿಯಾಗಿದ್ದ ನಾಯಕರು ಪ್ರಚಾರದ ಜತೆಗೆ ಮಾನವೀಯತೆಯನ್ನೂ ಮೆರೆದಿದ್ದಾರೆ. ಸಚಿವ ಆರ್. ಅಶೋಕ್ ಹಾಗೂ ರಾಜರಾಜೇಶ್ವರಿ ನಗರದ ಚುನಾವಣೆ ಪ್ರಚಾರ ನಡೆಸಿ ವಾಪಸಾಗುತ್ತಿದ್ದ ವೇಳೆ ಗಾಯಗೊಂಡವರನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಕನಕಪುರ ರಸ್ತೆಯಲ್ಲಿ ಬರುವಂತಹ ಸಂದರ್ಭದಲ್ಲಿ ಗೂಡ್ಸ್ ವಾಹನ ಮತ್ತು ಬೈಕ್ ಮಧ್ಯೆ ಅಪಘಾತವಾಗಿತ್ತು. ಅದೇ ರಸ್ತೆಯಲ್ಲಿ ಬರುತ್ತಿದ್ದ ಮಾನ್ಯ ಕಂದಾಯ ಸಚಿವರಾದ ಆರ್ ಅಶೋಕ್ ಮತ್ತು ಮುನಿರತ್ನ ತಮ್ಮ ವಾಹನದಲ್ಲಿ ಗಾಯಗೊಂಡವರನ್ನು ಶಂಕರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಅಶೋಕ್ ಹಾಗೂ ಮುನಿರತ್ನ ಅವರ ಮಾನವೀಯ ಕೆಲಸವನ್ನು ನೆರೆದಿದ್ದವರು ಕೊಂಡಾಡಿದದರು. ತಮ್ಮ ಬಿಡುವಿಲ್ಲದ ರಾಜಕೀಯ ಚಟುವಟಿಕೆ, ಪ್ರಚಾರದ ನಡುವೆಯೂ ಸಚಿವ ಅಶೋಕ್ ಹಾಗೂ ಮುನಿರತ್ನ ಗಾಯಗೊಂಡವನ್ನು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಕ್ಕೆ ಸಂತ್ರಸ್ತರ ಕುಟುಂಬದವರು ಅಭಿನಂದನೆ ಸಲ್ಲಿಸಿದ್ದಾರೆ.
from India & World News in Kannada | VK Polls https://ift.tt/35r9LO0