ಮುಂಬಯಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿರುವ ಎನ್ಸಿಪಿಯ , ಬಿಜೆಪಿ ಜೊತೆಗೆ ಎನ್ಸಿಪಿ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ರೈತರ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಲು ಈ ಮೈತ್ರಿ ಸಹಕಾರಿಯಾಗಲಿದೆ ಎಂದಿದ್ದಾರೆ. ಚುನಾವಣಾ ಫಲಿತಾಂದ ಬಳಿಕ ಯಾವುದೇ ಸರಕಾರ ರಚನೆಯಾಗಲಿಲ್ಲ. ರೈತರ ಸಮಸ್ಯೆ ಸೇರಿ ಹಲವಾರು ಸಮಸ್ಯೆ ರಾಜ್ಯವನ್ನು ಕಾಡುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲುಹೊಸ ಸರಕಾರದಿಂದ ಮಾತ್ರ ಸಾಧ್ಯ. ಹೀಗಾಗಿಯೇ ನಾವು ಮೈತ್ರಿ ಸರಕಾರ ರಚನೆ ಮಾಡಿದೆವು ಎಂದು ಪ್ರಮಾಣವಚನದ ಬಳಿಕ ಉಪಮುಖ್ಯಮಂತ್ರಿ ಅಜಿತ್ ಪವಾರ್ ಎಎನ್ಐ ಸುದ್ದಿ ಸಂಸ್ಥೆಗೆ ಹೇಳಿಕೆ ಕೊಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ಆಶ್ಚರ್ಯಕರ ಬೆಳವಣಿಗೆಯಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಸತತ ಎರಡನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮತ್ತು ಎನ್ಸಿಪಿಯ ಅಜಿತ್ ಪವಾರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗುರುವಾರದವರೆಗೆ ಕಾಂಗ್ರೆಸ್ , ಎನ್ಸಿಪಿ ಮತ್ತು ಶಿವಸೇನೆ ಸೇರಿ ಶುಕ್ರವಾರ ಸರಕಾರ ರಚನೆ ಮಾಡುವುದೆಂದು ಬಹುತೇಕ ನಿಗದಿಯಾಗಿತ್ತು. ಆದರೆ ರಾತ್ರೋರಾತ್ರಿ ಕಂಡು ಕೇಳರಿದ ಬೆಳವಣಿಗೆ ಎಂಬಂತೆ ಕಾಂಗ್ರೆಸ್, ಶಿವಸೇನೆ ಗೆ ಕೈಕೊಟ್ಟ ಎನ್ ಸಿಪಿ ಬಿಜೆಪಿ ಜೊತೆ ಸೇರಿ ಅಧಿಕಾರವನ್ನು ಹಂಚಿಕೊಂಡಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಗೆ ಒಂದು ತಿಂಗಳಾದರೂ ಸರಕಾರ ರಚನೆ ಮಾಡಲು ಆಗಿರಲಿಲ್ಲ. ಏಕೆಂದರೆ ಮಿತ್ರ ಪಕ್ಷ ಎನಿಸಿಕೊಂಡಿದ್ದ ಶಿವಸೇನೆ ಜೊತೆ ಅಧಿಕಾರ ಹಂಚಿಕೆ ವಿಚಾರವಾಗಿ ಅಸಮಾಧಾನ ಮೂಡಿತ್ತು. ಹೀಗಾಗಿ ರಾಷ್ಟ್ರಪತಿ ಆಳ್ವಕೆ ಜಾರಿಗೆ ಬಂದಿತ್ತು. ಬಳಿಕ ಶಿವಸೇನೆಯು ಬಿಜೆಪಿ ಜೊತೆ ತನ್ನ ಸಂಬಂಧವನ್ನು ಕಡಿದುಕೊಂಡು ಉಳಿದ ಪಕ್ಷದ ಜೊತೆ ಮೈತ್ರಿಗೆ ಮುಂದಾಗಿತ್ತು. 288 ಸದಸ್ಯ ಬಲ ಇರುವ ವಿಧಾನಸಭೆಯಲ್ಲಿ ಬಿಜೆಪಿ 105 ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಮೂಡಿಬಂದಿದ್ದರೆ, ಶಿವಸೇನೆ 56, ಎನ್ಸಿಪಿ 54 ಮತ್ತು ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದಿದೆ.
from India & World News in Kannada | VK Polls https://ift.tt/2Of5vLq