'ಮಹಾ' ರಾಜಕೀಯ ಬೆಳವಣಿಗೆ: ಯಾರು ಏನು ಹೇಳಿದರು ಗೊತ್ತಾ?

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿಯ ಮತ್ತೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಲ್ಲದೆ, ಎನ್‌ಸಿಪಿಯನ್ನೇ ಇಬ್ಭಾಗ ಮಾಡಿ ಅಜಿತ್‌ ಪವಾರ್‌ ಉಪ ಮುಖ್ಯಮಂತ್ರಿಯಾಗಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆ ಬಗ್ಗೆ ಯಾವ್ಯಾವ ನಾಯಕರು ಏನೇನು ಹೇಳಿದ್ದಾರೆ ಗೊತ್ತಾ? ಮಹಾರಾಷ್ಟ್ರದ ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಜಿ ಅವರಿಗೆ ಅಭಿನಂದನೆಗಳು. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರನ್ನು ನಾನು ಅಭಿನಂದಿಸುತ್ತೇನೆ. ಈ ಸರ್ಕಾರವು ರಾಜ್ಯದ ಪ್ರಗತಿಗೆ ಬದ್ಧವಾಗಿರುತ್ತದೆ ಮತ್ತು ಅಭಿವೃದ್ಧಿಯ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್‌ ಮಾಡಿದ್ದಾರೆ. ಈ ಹಿಂದೆ ಇವಿಎಂ ಆಟ ನಡೆಯುತ್ತಿತ್ತು. ಈಗ ಬಿಜೆಪಿ ಹೊಸ ಆಟ ಶುರುಮಾಡಿಕೊಂಡಿದ್ದಾರೆ. ಇನ್ನು ಮುಂದೆ, ಚುನಾವಣೆ ಸಹ ಅಗತ್ಯವೆಂದು ನಾನು ಭಾವಿಸುವುದಿಲ್ಲ. ಛತ್ರಪತಿ ಶಿವಾಜಿ ಬೆನ್ನಿಗೆ ಚೂರು ಹಾಕಿದಾಗ ಹಾಗೂ ಮೋಸ ಮಾಡಿದಾಗ ಛತ್ರಪತಿ ಶಿವಾಜಿ ಏನು ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರು ಶಿವಸೇನೆ ಶಾಸಕರನ್ನು ಇಬ್ಭಾಗ ಮಾಡಲು ಯತ್ನಿಸಲಿ. ಮಹಾರಾಷ್ಟ್ರವು ನಿದ್ರಿಸುವುದಿಲ್ಲ ಎಂದು ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ ಹೇಳಿದ್ದಾರೆ. ಅಜಿತ್ ಪವಾರ್ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿಗೆ ಹಾಕಿದ್ದಾರೆ: ಸಂಜಯ್ ರಾವತ್ ಅಜಿತ್‌ ಪವಾರ್‌ ಬಿಜೆಪಿ ಜತೆ ಕೈ ಜೋಡಿಸಿದ್ದರ ಹಿಂದೆ ಶರದ್‌ ಪವಾರ್‌ ಸಾಹೇಬರ ಕೈವಾಡವೇನೂ ಇಲ್ಲ. ಅಜಿತ್‌ ಪವಾರ್‌ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿಗೆ ಹಾಕಿದ್ದಾರೆ. ಅಜಿತ್ ಪವಾರ್‌ ಹಾಗೂ ಅವರಿಗೆ ಬೆಂಬಲ ನೀಡುತ್ತಿರುವ ಶಾಸಕರು ಛತ್ರಪತಿ ಶಿವಾಜಿ ಮಹಾರಾಜ್‌ ಹಾಗೂ ಮಹಾರಾಷ್ಟ್ರಕ್ಕೆ ಅವಮಾನ ಮಾಡಿದ್ದಾರೆ ಎಂದು ಶಿವಸೇನಾ ನಾಯಕ ಸಂಜಯ್‌ ರಾವತ್‌ ಟೀಕಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಅಜಿತ್ ಪವಾರ್‌ ತೆಗೆದುಕೊಂಡಿರುವ ನಿರ್ಧಾರ ಅವರ ವೈಯಕ್ತಿಕ ನಿರ್ಧಾರವೇ ಹೊರತು ಎನ್‌ಸಿಪಿಯದ್ದಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಹೇಳಿದ್ದಾರೆ. ಮಹಾರಾಷ್ಟ್ರದ ಬಗ್ಗೆ ನಾನು ಓದಿದ್ದು ಅವಾಸ್ತವವಾಗಿದೆ. ಇದು ನಕಲಿ ಸುದ್ದಿ ಎಂದು ನಾನು ಭಾವಿಸಿದ್ದೆ. ವೈಯಕ್ತಿಕವಾಗಿ ಹೇಳುವುದಾದರೆ, ನಮ್ಮ ತ್ರಿಪಕ್ಷೀಯ ಮಾತುಕತೆಗಳು ಮೂರು ದಿನಗಳಿಗಿಂತ ಹೆಚ್ಚು ಕಾಲ ಇರಬಾರದಿತ್ತು. ತುಂಬಾ ಸಮಯ ತೆಗೆದುಕೊಂಡಿತು. ಹೆಚ್ಚು ಸಮಯ ನೀಡಿದ್ದನ್ನು ವೇಗದ ಸಾಗಣೆದಾರರು ಪಡೆದುಕೊಂಡಿದ್ದಾರೆ. ಪವಾರ್‌ ಜೀ ನೀವು ನಿಜಕ್ಕೂ ಗ್ರೇಟ್‌ ಎಂದು ಅಭಿಷೇಕ್‌ ಸಿಂಘ್ವಿ ಪ್ರತಿಕ್ರಿಯೆ ನೀಡಿದ್ದಾರೆ. ಜನತೆಗೆ ಮಾಡಿದ ದ್ರೋಹ: ಕಾಂಗ್ರೆಸ್ ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್‌ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದು ಮಹಾರಾಷ್ಟ್ರ ಜನತೆಯ ತೀರ್ಪಿಗೆ ಮಾಡಿದ ದ್ರೋಹ ಎಂದು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಮಹಾರಾಷ್ಟ್ರದಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯ ಬಿಕ್ಕಟ್ಟಿಗೆ ನಾಟಕೀಯ ಅಂತ್ಯ ದೊರೆತಿದೆ. ಬಿಜೆಪಿಯ ಫಡ್ನವಿಸ್‌ ಸಿಎಂ ಆಗಿ ವಾಪಸಾಗಿದ್ದು, ಇದ್ಕಕೆ ಎನ್‌ಸಿಪಿ ಬೆಂಬಲ ನೀಡಿದೆ. ಇದು ಜನತೆಯ ತೀರ್ಪಿಗೆ ಮಾಡಿದ ದ್ರೋಹವಾಗಿದ್ದು, ಪ್ರಜಾಪ್ರಭುತ್ವವನ್ನು ಕೊಲ್ಲಲು ಗುತ್ತಿಗೆಗೆ ಕೊಟ್ಟಂತೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸುರ್ಜೇವಾಲಾ ಟ್ವೀಟ್‌ ಮಾಡಿದ್ದಾರೆ. ಮಹಾರಾಷ್ಟ್ರ ಜನರ ಆದೇಶವಿದೆ ಎಂದು ಹೇಳಿಕೊಳ್ಳಬಹುದಾದ ಎರಡು ಪಕ್ಷಗಳಿದ್ದರೆ, ಅವುಗಳು ಸರಕಾರವನ್ನು ರಚಿಸಲು ಇಂದು ಒಗ್ಗೂಡಿವೆ. ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಒಂದು ಐತಿಹಾಸಿಕ ಮೈತ್ರಿಯಾಗಿ ಪರಿಣಮಿಸುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಪ್ರತಿಕ್ರಿಯೆ ನೀಡಿದ್ದಾರೆ.


from India & World News in Kannada | VK Polls https://ift.tt/2sbw3F1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...