ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ, ಶಿವಸೇನಾ ಆಸೆಗೆ ಪಿನ್ ಚುಚ್ಚಿದ ಶರದ್ ಪವಾರ್ !

ಮುಂಬೈ: ಮುಖ್ಯಮಂತ್ರಿ ಅಧಿಕಾರ ಹಂಚಿಕೆ ವಿಚಾರವಾಗಿ ಬಿಜೆಪಿಯೊಂದಿಗೆ ಸರಿಯಾದ ಒಮ್ಮತ ಮೂಡದ ಕಾರಣಕ್ಕೆ ಜತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಲು ಯೋಜನೆ ಹಾಕಿಕೊಂಡಿದ್ದ ಪಕ್ಷದ ಆಸೆಗೆ ಎನ್‌ಸಿಪಿ ಮುಖ್ಯಸ್ಥ ಶಾಕ್ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸುವ ಪ್ರಶ್ನೆಯೇ ಇಲ್ಲ. ನಾಉ ವಿರೋಧ ಪಕ್ಷದಲ್ಲೇ ಉಳಿಯುತ್ತೇವೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ)ಯ ಮುಖ್ಯಸ್ಥ ಶರದ್ ಪವಾರ್ ಬುಧವಾರ ಕಡ್ಡಿ ಮುರಿದಂತೆ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣಕ್ಕೆ ಎನ್‌ಸಿಪಿ ಹಾಗೂ ಕಾಂಗ್ರೆಸ್‌ ನ ಬೆಂಬಲ ಪಡೆದು ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಲು ಶಿವಸೇನಾ ಯೋಚಿಸಿತ್ತು. ಇದಕ್ಕಾಗಿ ಶರದ್ ಪವಾರ್ ಅವರನ್ನು ಬುಧವಾರ ಶಿವಸೇನಾ ನಾಯಕ ಸಂಜಯ್ ರಾವತ್ ಭೇಟಿ ಮಾಡಿ ಮಾತುಕತೆ ಕೂಡ ನಡೆಸಿದ್ದರು. ಆದರೆ ಎನ್‌ಡಿಎ ಮೈತ್ರಿಕೂಟದಿಂದ ಸಂಪೂರ್ಣವಾಗಿ ಹೊರಬಂದರೆ ಮಾತ್ರವೇ ಸರಕಾರ ರಚಿಸಲು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಷರತ್ತು ವಿಧಿಸಿದ್ದರು. ಸಂಜಯ್ ರಾವತ್ ಭೇಟಿಯ ಸ್ಪಲ್ಪ ಸಮಯದ ಬಳಿಕ ಸುದ್ದಿಗೋಷ್ಠಿ ನಡೆಸಿದ ಶರದ್ ಪವಾರ್, ರಾಜ್ಯದಲ್ಲಿ ಸರಕಾರ ರಚನೆ ಮಾಡಲು ಶಿವಸೇನಾಗೆ ಎನ್‌ಸಿಪಿ ಯಾವುದೇ ರೀತಿಯಲ್ಲಿ ಬೆಂಬಲ ನೀಡುವುದಿಲ್ಲ. ಚುನಾವಣೆಗೂ ಮುನ್ನ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಶಿವಸೇನಾ ಈಗ ಕೂಡ ಸರಕಾರ ರಚನೆ ಮಾಡಲಿ ಎಂದು ಹೇಳುವ ಮೂಲಕ ಇಲ್ಲಿವರೆಗೆ ಇದ್ದ ಎಲ್ಲಾ ಗೊಂದಲಗಳಿಗೂ ಫುಲ್ ಸ್ಟಾಪ್ ಇಟ್ಟಿದ್ದಾರೆ. ಬಿಜೆಪಿ-ಶಿವಸೇನೆ ಪರವಾಗಿ ರಾಜ್ಯದ ಜನತೆ ತೀರ್ಪು ಕೊಟ್ಟಿದ್ದಾರೆ. ಅದನ್ನು ನಾವು ಸ್ವೀಕರಿಸಿದ್ದೇವೆ ಕೂಡ. ಎನ್‌ಸಿಪಿ ಮತ್ತು ಕಾಂಗ್ರೆಸ್ ಗೆ ಜವಾಬ್ದಾರಿಯುತ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಜನರು ಕೊಟ್ಟ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ. ಶಿವಸೇನೆ ಮತ್ತು ಬಿಜೆಪಿಯ ಮೈತ್ರಿ 25 ವರ್ಷಗಳಿಂದ ಇದೆ. ಈಗ ಅವರು ಬೇರೆಯಾಗಲು ಹೇಗೆ ಸಾಧ್ಯ. ಹೀಗಾಗಿ ಅವರೇ ಸಾಧ್ಯವಾದಷ್ಟು ಬೇಗನೆ ಸರಕಾರ ರಚಿಸಬೇಕು. ಮಹಾರಾಷ್ಟ್ರ ರಾಜಕೀಯ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಏನು ನಿರ್ಧಾರ ತೆಗೆದುಕೊಂಡಿದೆ ಎಂಬ ವಿಚಾರ ನನಗೆ ತಿಳಿದಿಲ್ಲ ಎಂದರು. ನಾನು ನಾಲ್ಕು ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈಗ ನನಗೆ ಮತ್ತೆ ಅದೇ ಸ್ಥಾನ ಬೇಕೆಂಬ ಯಾವ ಆಸೆಯೂ ಇಲ್ಲ. ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯನ್ನು ತಪ್ಪಿಸಲು ಉಳಿದಿರುವ ಒಂದೇ ಒಂದು ಮಾರ್ಗವೆಂದರೆ ಅದು ಬಿಜೆಪಿ-ಶಿವಸೇನೆ ಮೈತ್ರಿ ಸರಕಾರ ರಚನೆ ಮಾತ್ರ ಎಂದಿದ್ದಾರೆ. ಇನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಭೇಟಿ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶರದ್ ಪವಾರ್ , ರಾವತ್ ಬೆಳಗ್ಗೆ ನನ್ನನ್ನು ಭೇಟಿ ಮಾಡಿ ಮುಂಬರುವ ಸಂಸತ್ ಅಧಿವೇಶನ ಬಗ್ಗೆ ಮಾತುಕತೆ ನಡೆಸಿದರು. ನಮ್ಮ ಸಮಾನ ನಿಲುವಿನ ಕೆಲವು ವಿಚಾರಗಳನ್ನು ಕೂಡ ನಾವು ಚರ್ಚಿಸಿದೆವು ಎಂದರು.


from India & World News in Kannada | VK Polls https://ift.tt/33lRsJr

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...