ಮಾಜಿ ಸಚಿವ ವೈಜನಾಥ ಪಾಟೀಲ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರಿಂದ ಸಂತಾಪ

ಬೆಂಗಳೂರು: ಮಾಜಿ ಸಚಿವ, ಕಲ್ಯಾಣ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ಮುಂತಾದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವೈಜನಾಥ ಪಾಟೀಲರ ನಿಧನದಿಂದ ತೀವ್ರ ದುಃಖವಾಗುತ್ತದೆ. ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ವಿಧಿಯ ಮುಖಾಂತರ ವಿಶೇಷ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಈ ಭಾಗದ ಅಭಿವೃದ್ಧಿಯ ಕುರಿತ ಅವರು ತೋರಿದ ಕಾಳಜಿ ಅನನ್ಯವಾದುದು. ಶಾಸಕರಾಗಿ ಹಾಗೂ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ತೋಟಗಾರಿಕಾ ಸಚಿವರಾಗಿ ಮತ್ತು ದೇವೇಗೌಡರ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಅವರ ಕೊಡುಗೆಯೂ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಅವರ ನಿಧನದಿಂದ ಒಬ್ಬ ನೇರ ನಡೆ, ನುಡಿಯ ಹೋರಾಟಗಾರ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದಿರುವ ಮುಖ್ಯಮಂತ್ರಿಗಳು, ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ. ಹುಟ್ಟು ಹೋರಾಟಗಾರರೂ, ಮಾಜಿ ಸಚಿವರೂ ಆದಂತಹ ವೈಜನಾಥ ಪಾಟೀಲರರ ನಿಧನದಿಂದ ಅತೀವ ದುಃಖವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ಪಾಟೀಲರ ನಿಧನದಿಂದ ನೇರ ನಡೆ ನುಡಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಶ್ರೀಯುತರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಬಿಎಸ್‌ ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ. ಮಾಜಿ ಸಚಿವ, 371ಜೆ ವಿಧಿ ಹೋರಾಟಗಾರ ವೈಜನಾಥ ಪಾಟೀಲರ ನಿಧನ ತೀವ್ರ ಬೇಸರ ತರಿಸಿದೆ. ಎಚ್‌ಡಿ ದೇವೇಗೌಡ ಸಂಪುಟದಲ್ಲಿ ಸಚಿವರಾಗಿದ್ದ ಅವರು, ಈಗಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸದಾ ಮಿಡಿಯುತ್ತಿದ್ದರು. ಈ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಎರಡು ದಶಕಗಳ ಹಿಂದೆ ಧ್ವನಿ ಎತ್ತಿ ಹೋರಾಟ ಆರಂಭಿಸಿದ್ದೇ ಪಾಟೀಲರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಪಾಟೀಲ ಅವರು 371ಜೆ ವಿಧಿ ತಿದ್ದುಪಡಿ ಜಾರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ 1984ರಲ್ಲಿ ತೋಟಗಾರಿಕೆ ಹಾಗೂ ಹಾಗು ನನ್ನ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಹೈದರಾಬಾದ್ ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪಾಟೀಲರ ಮನಸ್ಸು ಸದಾ ಮಿಡಿಯುತ್ತಿತ್ತು. ಈ ಭಾಗದ ಅಭಿವೃದ್ಧಿಗಾಗಿ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿ ಜಾರಿಗೆ ಆಗ್ರಹಿಸಿ ಎರಡು ದಶಕಗಳ ಹಿಂದೆ ಧ್ವನಿ ಎತ್ತಿ ಹೋರಾಟ ರೂಪಿಸಿದವರೇ ವೈಜನಾಥ ಪಾಟೀಲ. 371 ಜೆ ವಿಧಿ ಜಾರಿಯಲ್ಲದೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಏನಾದರೂ ಅನ್ಯಾಯವಾದರೆ ತಕ್ಷಣವೇ ಸರಕಾರ ದ ಗಮನ ಸೆಳೆಯುತ್ತಿದ್ದರು. ಹೋರಾಟಕ್ಕೆ ಇನ್ನೊಂದು ಹೆಸರು ವೈಜನಾಥ ಪಾಟೀಲ ಎಂದೇ ಹೆಸರು ಪಡೆದ ಪಾಟೀಲರನ್ನು ಕಳೆದುಕೊಂಡ ಕಲ್ಯಾಣ ಕರ್ನಾಟಕವಿಂದು ಬಡವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಭಗವಂತ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸಂತಾಪ ವ್ಯಕ್ತಪಡಿಸಿದರು. ಮಾಜಿ ಸಚಿವರಾದ ವೈಜನಾಥ ಪಾಟೀಲರು ಅಗಲಿದ ಸುದ್ದಿ ಕೇಳಿ ದುಃಖವಾಗಿದೆ. ಪಾಟೀಲರು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದು ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿ ದೇವೇಗೌಡರು ಟ್ವೀಟ್‌ನಲ್ಲಿ ಸ್ಮರಿಸಿದ್ದಾರೆ. ಆತ್ಮೀಯರಾಗಿದ್ದ ಮಾಜಿ ಸಚಿವ ವೈಜನಾಥ ಪಾಟೀಲ ನಿಧನದಿಂದ ಆಘಾತವಾಗಿದೆ. ಉತ್ತರ ಕರ್ನಾಟಕದ ಅಭಿವೃದ್ದಿಗಾಗಿ ಹೋರಾಟ ನಡೆಸುತ್ತಾ ಬಂದಿದ್ದ ಪಾಟೀಲ, ಹೈದರಾಬಾದ್ ಕರ್ನಾಟಕಕ್ಕೆ ವಿಶೇಷಸ್ಥಾನಮಾನ ಪಡೆಯಲು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.


from India & World News in Kannada | VK Polls https://ift.tt/36sWgyA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...