ಮಂಗಳೂರು: ನಗರಕ್ಕೆ ಗಾಂಜಾ ಪೂರೈಕೆ ಮಾಡುವ ಬೃಹತ್ ಜಾಲವನ್ನು ನಗರ ಪೊಲೀಸರು ಬುಧವಾರ ಬೇಧಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡು ಮಂಜೇಶ್ವರ ನಿವಾಸಿ ಅಬೂಬಕರ್ ಸಮದ್ (24), ಮಂಜೇಶ್ವರ ಕಡಂಬಾರು ನಿವಾಸಿಗಳಾದ ಮಹಮ್ಮದ್ ಅಶ್ರಫ್ (30), ಮೊಹಮ್ಮದ್ ಅಫ್ರಿದಿ (22) ಹಾಗೂ ಮಹಮ್ಮದ್ ಅರ್ಷದ್ (18) ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 2 ಲಕ್ಷ ರೂ. ಮೌಲ್ಯದ 10 ಕೆಜಿ ಗಾಂಜಾ, ಕೃತ್ಯಕ್ಕೆ ಉಪಯೋಗಿಸಿದ ಮಹಾರಾಷ್ಟ್ರ ನೋಂದಣಿಯ ಕಾರು, ಸ್ಕೂಟರ್ ಹಾಗೂ 3 ಮೊಬೈಲ್ ಸೇರಿ ಸುಮಾರು 5 ಲಕ್ಷ ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಗೆ ಕೇರಳ, ಮುಂಬಯಿ, ಸಂಪರ್ಕ ಇರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
from India & World News in Kannada | VK Polls https://ift.tt/2WNVOq1