ಚಿಕ್ಕಮಗಳೂರು: ಶಾಸಕತನ್ವೀರ್ ಸೇಠ್ ಮೇಲೆ ದಾಳಿಗೆ ಪರೋಕ್ಷವಾಗಿ ಕಾರಣ ಎಂಬ ಸಿಎಂ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕೊಲೆ ಯತ್ನ ಮಾಡಿರುವುದು ಪಿಎಫ್ಐ ಸಂಘಟನೆಯವರಲ್ಲ, ಎಸ್ಡಿಪಿಐ ಕಾರ್ಯಕರ್ತ ಎಂದು ಪೊಲೀಸರೇ ಹೇಳಿದ್ದಾರೆ. ಕ್ರಿಮಿನಲ್ ಕೆಲಸ ಮಾಡುವ ಯಾರಿಗೂ ನನ್ನ ಬೆಂಬಲವಿಲ್ಲ ಎಂದಿದ್ದಾರೆ. ಮೈಸೂರಿನ ಬನ್ನಿಮಂಟಪದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ಸಂಗೀತ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಮೇಲೆ ಏಕಾಏಕಿ ದಾಳಿ ನಡೆಸಿದ ಯುವಕನೊಬ್ಬ ಡ್ರ್ಯಾಗರ್ನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದ. ಈ ಸಂದರ್ಭ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದರು. ಈ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಿಎಂ ಬಿಎಸ್ವೈ, ಪಿಎಫ್ಐ ಮೇಲಿನ ಪ್ರಕರಣಗಳನ್ನು ಸಿದ್ದರಾಮಯ್ಯ ಹಿಂತೆಗೆದುಕೊಂಡರು. ಇದು ತನ್ವೀರ್ ಸೇಠ್ ಮೇಲಿನ ದಾಳಿಗೆ ಕಾರಣ ಎಂಬಂತೆ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ದೂರಿದ್ದರು. ಸಿ ಎಂ ಯಡಿಯೂರಪ್ಪ ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ. ಸಿ ಎಂ ರಾಜಕೀಯಕ್ಕಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಕೊಲೆ ಯತ್ನ ಮಾಡಿರುವುದು ಪಿಎಫ್ಐ ಅಲ್ಲ, ಎಸ್ಡಿಪಿಐ ಕಾರ್ಯಕರ್ತ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಕ್ರಿಮಿನಲ್ ಕೆಲಸ ಮಾಡುವ ಯಾರಿಗೂ ನನ್ನ ಬೆಂಬಲ ಇಲ್ಲ ಎಂದು ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಅನರ್ಹ ಶಾಸಕರು ಅಪರಾಧಿಗಳು ಎಂಬ ಸಿದ್ದರಾಮಯ್ಯ ಹೇಳಿಕೆ ನೀಡಿರುವುದಾಗಿ ಬಿಎಸ್ ಯಡಿಯೂರಪ್ಪ ಉಲ್ಲೇಖಿಸಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅನರ್ಹ ಶಾಸಕರು ಅಪರಾಧಿಗಳೆಂದು ಸುಪ್ರೀಂ ಕೋರ್ಟೇ ಹೇಳಿದೆ. ನಾನು ಹೇಳಿದ್ದು ಅಲ್ಲ. ಸಿಎಂ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
from India & World News in Kannada | VK Polls https://ift.tt/2Qxv3VH