ಕೃಷಿತ್ಯಾಜ್ಯ ದಹನ ನಿಲ್ಲಿಸಿ ಇಲ್ಲವೇ ನ್ಯಾ. ನಿಂದನೆ ಎದುರಿಸಿ : ದಿಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಸುಪ್ರೀಂ ಆದೇಶ

ಹೊಸದಿಲ್ಲಿ: ಈಗಾಗಲೇ ದಿಲ್ಲಿಯ ವಾಯುಮಾಲಿನ್ಯ ಕೈಮೀರಿದ್ದು, ಜನತೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಾಯುಮಾಲಿನ್ಯ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಈ ಕುರಿತು ವಿಚಾರಣೆ ನಡೆಸಿದ್ದು, ವಾಯುಮಾಲಿನ್ಯಕ್ಕೆ ದೆಹಲಿ ಸುತ್ತಲಿನ ರಾಜ್ಯಗಳನ್ನೇ ಹೊಣೆಯಾಗಿಸಿದೆ. ದೆಹಲಿಯ ನೆರೆರಾಜ್ಯಗಳಾದ ಉತ್ತರಪ್ರದೇಶ, ಹಾಗೂ ರಾಜ್ಯಗಳಲ್ಲಿ ರೈತರು ತಮ್ಮ ಕೃಷಿ ತ್ಯಾಜ್ಯವನ್ನು ಸುಡದಂತೆ ಆಯಾ ರಾಜ್ಯಗಳೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಾಂಗ ನಿಂದನೆ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಮೂರೂ ರಾಜ್ಯಗಳಿಗೆ ಆದೇಶಿಸಿದೆ. ಜತೆಗೆ ರಾಷ್ಟ್ರ ರಾಜಧಾನಿ ಪ್ರದೇಶ ಹಾಗೂ ದಿಲ್ಲಿಯ ಸುತ್ತಲಿನ ಪ್ರದೇಶದಲ್ಲಿ ಮುಂದಿನ ಆದೇಶದವರೆಗೂ ಯಾವುದೇ ನಿರ್ಮಾಣ ಕಾರ್ಯ ಅಥವಾ ಕಟ್ಟಡ ತೆರವು ಕಾಮಗಾರಿಗಳನ್ನು ಕೈಗೊಳ್ಳುವಂತಿಲ್ಲ ಎಂದು ಆದೇಶಿಸಿದೆ. ಆದೇಶ ಉಲ್ಲಂಘನೆಗೆ 1 ಲಕ್ಷ ರೂ ದಂಡ ದೆಹಲಿ ಹಾಗೂ ರಾಷ್ಟ್ರ ರಾಜಧಾಣಿ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ಕಾಮಗಾರಿ ನಡೆಸಿದವರಿಗೆ 1 ಲಕ್ಷ ರೂ. ಹಾಗೂ ತ್ಯಾಜ್ಯಕ್ಕೆ ಬೆಂಕಿ ಹಾಕುವವರಿಗೆ 5 ಸಾವಿರ ರೂ. ದಂಡ ವಿಧಿಸಲು ಸುಪ್ರೀಂಕೋರ್ಟ್ ಆದೇಶಿಸಿದೆ. ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಕೂಡ ಹಲವಾರು ಸಲಹೆಗಳನ್ನು ಲನೀಡಿದ್ದು, ದೆಹಲಿ ಹಾಗೂ ಸುತ್ತಲಿನ ರಾಜ್ಯಗಳ ಕೈಗಾರಿಕೆಗಳು ಹೊರಸೂಸುವ ವಿಷಕಾರಿ ಅಂಶಗಳನ್ನು ತಡೆಗಟ್ಟಬೇಕು. ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ತಿಳಿಸಿತ್ತು. ದೆಹಲಿ ವಾಯುಮಾಲಿನ್ಯದ ಪರಿಸ್ಥಿತಿ ಕಜುರಿತು ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರದಿಂದ (ಇಪಿಸಿಎ) ಸುಪ್ರೀಂಕೋರ್ಟ್ ವರದಿ ಪಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠ, ನಾವು ಇಂತಹ ವಾತಾವರಣದಲ್ಲಿ ಬದುಕಲು ಸಾಧ್ಯವೇ? ಜನರು ತಮ್ಮ ಮನೆಗಳ ಒಳಗೂ ಸುರಕ್ಷಿತವಾಗಿಲ್ಲ. ಮಾಲಿನ್ಯದಿಂದಾಗಿ ಅವರು ಜೀವನದ ಅಮೂಲ್ಯ ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ. ದೆಹಲಿಯ ಇಂದಿನ ಪರಿಸ್ಥಿತಿಗೆ ಮೂರು ರಾಜ್ಯ ಸರ್ಕಾರಗಳೇ ಜವಾಬ್ದಾರಿ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಕೃಷಿ ತಾಜ್ಯಕ್ಕೆ ಬೆಂಕಿ ಹಚ್ಚುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನ್ಯಾ. ಅರುಣ್ ಮಿಶ್ರಾ, ದೆಹಲಿ ಮಾಲಿನ್ಯ ವಿಷಯವನ್ನು ನಾವೇ ಮೇಲ್ವಿಚಾರಣೆ ಮಾಡುತ್ತೇವೆ. ಕೃಷಿ ತ್ಯಾಜ್ಯ ಸುಡುವುದು ತಕ್ಷಣ ನಿಲ್ಲಬೇಕು ಹಾಗೂ ಅದನ್ನು ತಡೆಯಲು ಎಲ್ಲ ರಾಜ್ಯಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಕೃಷಿ ತ್ಯಾಜ್ಯಕ್ಕೆ ಬೆಂಕಿ ಇಡುವವರು, ಇದಕ್ಕೆ ಸಂಬಂಧಿಸಿದ ಎಲ್ಲರನ್ನು ವಿಚಾರಣೆ ನಡೆಸಲಾಗುತ್ತದೆ. ಸಮಸ್ಯೆಗೆ ಈಗ ದೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕಿದೆ ಎಂದಿದ್ದಾರೆ. ವಾಯು ಗುಣಮಟ್ಟ, ಹವಾಮಾನ ಮುನ್ಸೂಚನೆ ಮತ್ತು ಸಂಶೋಧನಾ ವ್ಯವಸ್ಥೆ (SAFAR)ಪ್ರಕಾರ (AQI) 480ಕ್ಕೂ ಕೆಳಮಟ್ಟಕ್ಕೆ ಕುಸಿದಿದೆ. ಅಂದ್ರೆ ತೀವ್ರ ಕಳಪೆ (ವೆರಿ ಪೂರ್‌) ಮಟ್ಟಕ್ಕೆ ಕುಸಿದಿದೆ. ಇದು ವಿಶ್ವ ಆರೋಗ್ಯ ಸಂಸ್ಥೆ ನಿಗದಿಮಾಡಿರುವ ಅಪಾಯಕಾರಿ ಮಟ್ಟಕ್ಕಿಂತಲೂ ಹಲವು ಪಟ್ಟು ಹೆಚ್ಚಿದೆ.


from India & World News in Kannada | VK Polls https://ift.tt/2WLkr6T

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...