ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ಸದ್ಯ ಜೈಲುಪಾಲಾಗಿರುವ ಕೇಂದ್ರದ ಮಾಜಿ ಸಚಿವ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠದಿಂದ ಜಾಮೀನು ಮಂಜೂರಾಗಿದ್ದು, 2 ಲಕ್ಷ ಬಾಂಡ್ ಮತ್ತು ಇಬ್ಬರು ವ್ಯಕ್ತಿಗಳ ಶೂರಿಟಿಯನ್ನು ನೀಡಲು ಕೋರ್ಟ್ ಷರತ್ತು ವಿಧಿಸಿದೆ. ಮಾತ್ರವಲ್ಲ ಚಿದಂಬರಂ ತನ್ನ ಪಾಸ್ ಪೋರ್ಟ್ ಅನ್ನು ಕೋರ್ಟ್ ಗೆ ಒಪ್ಪಿಸಲು ಹೇಳಿದ್ದು ವಿದೇಶ ಪ್ರಯಾಣ ಮಾಡಬಾರದು , ಯಾರಿಗೂ ಸಂದರ್ಶನ ನೀಡಬಾರದು ಮತ್ತು ಸಾರ್ವಜನಿಕ ಹೇಳಿಕೆ ಕೊಡುವಂತಿಲ್ಲ ಎಂದು ಹೇಳಿದೆ. ತಮಗೆ ಜಾಮೀನು ನೀಡಲು ದಿಲ್ಲಿ ಹೈಕೋರ್ಟ್ ನ.15ರಂದು ನಿರಾಕರಿಸಿದ್ದನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನ.28ರಂದು ನಡೆದು ಇಂದಿಗೆ ತೀರ್ಪು ಕಾಯ್ದಿರಿಸಲಾಗಿತ್ತು. 2007ರಲ್ಲಿ ಚಿದಂಬರಂ ಕೇಂದ್ರ ವಿತ್ತ ಸಚಿವರಾಗಿದ್ದಾಗ ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ ವಿದೇಶಿ ಬಂಡವಾಳ ಹೂಡಿಕೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕ ಮಂಡಳಿ (ಎಫ್ಐಪಿಬಿ)ಯ ಒಪ್ಪಿಗೆ ಸಿಕ್ಕಿತ್ತು. ಇದನ್ನು ಮಗನ ಶಿಫಾರಸಿನ ಮೇಲೆ ಚಿದಂಬರಂ ದೊರಕಿಸಿಕೊಟ್ಟಿದ್ದರೆಂಬ ಆರೋಪವಿದೆ.
from India & World News in Kannada | VK Polls https://ift.tt/33N2FSL