ಮುಂದಿನ ಜೂನ್‌ನಿಂದ ಒಂದು ನೇಷನ್‌, ಒಂದು ರೇಷನ್‌ ಕಾರ್ಡ್‌ ಯೋಜನೆ

ಹೊಸದಿಲ್ಲಿ: ಮುಂದಿನ ವರ್ಷದ ಜೂನ್‌ನಿಂದ ಒಂದು ದೇಶ-ಒಂದು ಪಡಿತರ ಚೀಟಿ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಈ ಮಾಹಿತಿ ನೀಡಿದ ಸಚಿವರು, ಈಗಾಗಲೇ ಈ ವ್ಯವಸ್ಥೆಯನ್ನು ತಾತ್ಕಲಿಕವಾಗಿ ಹಲವು ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ ಎಂದರು. ಮುಂದಿನ ವರ್ಷದ ಜೂನ್ ಒಂದರಿಂದ ದೇಶಾದ್ಯಂತ ಒಂದು ದೇಶ, ಒಂದು ಪಡಿತರ ಚೀಟಿ ವ್ಯವಸ್ಥೆ ಜಾರಿಗೆ ಬರಲಿದೆ. ಇದರಿಂದ ಬಡವರು ಮತ್ತು ಜನ ಸಾಮಾನ್ಯರು ಯಾವುದೇ ರಾಜ್ಯ, ಯಾವುದೇ ಜಿಲ್ಲೆಯಲ್ಲಿ ಪಡಿತರ ಪಡೆಯಲು ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು. ಕೇಂದ್ರ ಸರಕಾರ ಪಡಿತರ ಚೀಟಿದಾರರಿಗೆ ಎರಡು ರೂಪಾಯಿ ದರದಲ್ಲಿ ಗೋಧಿ, ಮೂರು ರೂಪಾಯಿ ದರದಲ್ಲಿ ಅಕ್ಕಿಯನ್ನು ಪೂರೈಕೆ ಮಾಡುತ್ತಿದೆ. ಬಹಳ ದಿನಗಳಿಂದ ಒಂದು ದೇಶ ಒಂದು ಪಡಿತರ ಚೀಟಿ ವ್ಯವಸ್ಥೆ ಜಾರಿಗೆ ಬರಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿತ್ತು ಎಂದರು. ಕೇಂದ್ರ ಸರಕಾರ ಈಗಾಗಲೇ ಇದನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದೆ ಎಂದು ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸದನಕ್ಕೆ ತಿಳಿಸಿದರು.


from India & World News in Kannada | VK Polls https://ift.tt/2syPVC3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...