ವರ್ಷಾಂತ್ಯದ ಕದನ; ವಿಂಡೀಸ್ ಕದನಕ್ಕೆ ವಿರಾಟ್ ಕೊಹ್ಲಿ ಪಡೆ ಸಜ್ಜು

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡವೀಗ ವೆಸ್ಟ್‌ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಸೀಮಿತ ಓವರ್‌ಗಳ ಸರಣಿಗೆ ಸಜ್ಜಾಗುತ್ತಿದೆ. ಇದರಂತೆ ಟೀಮ್ ಇಂಡಿಯಾ ನಾಯಕ ಟ್ವಿಟರ್‌ನಲ್ಲಿ ಚಿತ್ರವೊಂದನ್ನು ಹಂಚಿದ್ದಾರೆ. ವಿಮಾನದಲ್ಲಿ ಹೈದರಾಬಾದ್‌ಗೆ ಪ್ರಯಾಣ ಬೆಳೆಸುವ ಚಿತ್ರವನ್ನು ಅಭಿಮಾನಿಗಳ ಜತೆಗೆ ವಿರಾಟ್ ಕೊಹ್ಲಿ ಹಂಚಿದ್ದಾರೆ. ಕೆಎಲ್ ರಾಹುಲ್ ಹಾಗೂ ಶಿವಂ ದುಬೆ ಜತೆಗಿನ ಸೆಲ್ಫಿ ಚಿತ್ರವನ್ನು ಕೊಹ್ಲಿ ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಭಾರತ ತಂಡವೀಗ ವಿಂಡೀಸ್ ವಿರುದ್ಧ ತಲಾ ಮೂರು ಪಂದ್ಯಗಳ ಏಕದಿನ ಹಾಗೂ ಟ್ವೆಂಟಿ-20 ಸರಣಿಯಲ್ಲಿ ಭಾಗವಹಿಸಲಿದೆ. ಟಿ20 ಸರಣಿಯ ಮೊದಲ ಪಂದ್ಯ ಡಿಸೆಂಬರ್ 6ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ಇತ್ತೀಚೆಗಷ್ಟೇ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಟ್ವೆಂಟಿ-20 ಹಾಗೂ ಟೆಸ್ಟ್ ಸರಣಿಗಳಲ್ಲಿ ಭಾರತ ಗೆಲುವು ಬಾರಿಸಿತ್ತು. ಈ ಪೈಕಿ ಕೋಲ್ಕತಾದಲ್ಲಿ ನಡೆದ ಚಾರಿತ್ರಿಕ ಪಿಂಕ್ ಬಾಲ್ ಡೇ ನೈಟ್ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 46 ರನ್ ಅಂತರದ ಗೆಲುವು ದಾಖಲಿಸಿತ್ತು. ಟ್ವೆಂಟಿ-20 ಕ್ರಿಕೆಟ್‌ನಲ್ಲಿ ವಿಶ್ವ ಚಾಂಪಿಯನ್ ಆಗಿರುವ ವಿಂಡೀಸ್‌ನಿಂದ ನಿಕಟ ಪೈಪೋಟಿ ಏರ್ಪಡು ನಿರೀಕ್ಷೆಯಿದೆ. ಇನ್ನೊಂದೆಡೆ ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಹಾದಿಯಲ್ಲಿರುವ ಟೀಮ್ ಇಂಡಿಯಾ ಸೂಕ್ತ ಹೊಂದಾಣಿಕೆಯ ಹುಡುಕಾಟದಲ್ಲಿದೆ. ಈ ಹಿನ್ನಲೆಯಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶವನ್ನು ನೀಡುತ್ತಿದೆ. ಟಿ20 ಸರಣಿ ವೇಳಾಪಟ್ಟಿ ಇಂತಿದೆ: ಮೊದಲ ಟ್ವೆಂಟಿ-20: ಡಿ. 6, ಶುಕ್ರವಾರ, ಹೈದರಾಬಾದ್, ಸಮಯ: ರಾತ್ರಿ 7ಕ್ಕೆ. ದ್ವಿತೀಯ ಟ್ವೆಂಟಿ-20: ಡಿ. 8, ಭಾನುವಾರ, ತಿರುವನಂತಪುರ, ಸಮಯ: ರಾತ್ರಿ 7ಕ್ಕೆ. ಅಂತಿಮ ಟ್ವೆಂಟಿ-20: ಡಿ. 11, ಬುಧವಾರ, ಮುಂಬಯಿ, ಸಮಯ: ರಾತ್ರಿ 7ಕ್ಕೆ. ಏಕದಿನ ಸರಣಿ ವೇಳಾಪಟ್ಟಿ ಇಂತಿದೆ: ಮೊದಲ ಏಕದಿನ: ಡಿ. 15, ಭಾನುವಾರ, ಚೆನ್ನೈ, ಸಮಯ: ಅಪರಾಹ್ನ 2ಕ್ಕೆ. ದ್ವಿತೀಯ ಏಕದಿನ: ಡಿ. 18, ಬುಧವಾರ, ವಿಶಾಖಪಟ್ಟಣ, ಸಮಯ: ಅಪರಾಹ್ನ 2ಕ್ಕೆ. ಅಂತಿಮ ಏಕದಿನ: ಡಿ. 22, ಭಾನುವಾರ, ಕಟಕ್, ಸಮಯ: ಅಪರಾಹ್ನ 2ಕ್ಕೆ. ಭಾರತ ಟ್ವೆಂಟಿ-20 ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ರವೀಂದ್ರ ಜಡೇಜಾ, ಕೆಎಲ್ ರಾಹುಲ್, ರಿಷಬ್ ಪಂತ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ದೀಪಕ್ ಚಹರ್, ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್. ಭಾರತ ಏಕದಿನ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ಶಿವಂ ದುಬೆ, ರವೀಂದ್ರ ಜಡೇಜಾ, ಕೆಎಲ್ ರಾಹುಲ್, ರಿಷಬ್ ಪಂತ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ದೀಪಕ್ ಚಹರ್, ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/363OQ3U

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...